Breaking News
Home / Uncategorized / ರಾಜ್ಯದ 17.09 ಲಕ್ಷ ಸಣ್ಣ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ನಿರ್ಧಾರ!

ರಾಜ್ಯದ 17.09 ಲಕ್ಷ ಸಣ್ಣ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ನಿರ್ಧಾರ!

Spread the love

ಬೆಂಗಳೂರು: ರಾಜ್ಯದಲ್ಲಿ17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ತಲಾ 2800 ರೂ.ನಿಂದ 3000 ರೂ. ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.

ರಾಜ್ಯದಲ್ಲಿಬರ, ನೆರೆ ಹಾಗೂ ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ ನಿರ್ಣಯ ಕೈಗೊಳ್ಳಲು ರಚನೆಯಾಗಿರುವ ಸಚಿವ ಸಂಪುಟ ಉಪಸಮಿತಿಯ ಸಭೆ ಸೋಮವಾರ ವಿಧಾನಸೌಧದಲ್ಲಿ ನಡೆಯಿತು.

ರಾಜ್ಯದ 17.09 ಲಕ್ಷ ಸಣ್ಣ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ನಿರ್ಧಾರ!

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಬರದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲಾಗುತ್ತಿದ್ದು, ರೈತರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಹಾಗೆಯೇ ಮಳೆಯಾಶ್ರಿತ ಹಾಗೂ ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಾಗುವುದು. ಇದರಿಂದ 7 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ. ಜಿಲ್ಲಾಧಿಕಾರಿಗಳ ವರದಿ ಆಧರಿಸಿ ಪರಿಹಾರ ವಿತರಿಸಲಾಗುವುದು ಎಂದು ಹೇಳಿದರು.

ಕೇಂದ್ರ ಸರಕಾರದಿಂದ ಎನ್‌ಡಿಆರ್‌ಎಫ್‌ ಪರಿಹಾರವಾಗಿ 3,454 ಕೋಟಿ ರೂ. ರಾಜ್ಯಕ್ಕೆ ಬಂದಿತ್ತು. ಅದರಂತೆ 27.50 ಲಕ್ಷ ರೈತರಿಗೆ 2,451 ಕೋಟಿ ರೂ. ಪರಿಹಾರವನ್ನು ಮೇ ತಿಂಗಳU ಮೊದಲ ವಾರದಲ್ಲೇ ವಿತರಿಸಲಾಗಿದೆ. ಎನ್‌ಡಿಆರ್‌ಎಫ್‌ನ ಉಳಿದ ಹಣ ಮತ್ತು ರಾಜ್ಯ ಸರಕಾರದಿಂದ 272 ಕೋಟಿ ರೂ. ಸೇರಿಸಿ ಸಣ್ಣ, ಅತಿ ಸಣ್ಣ ರೈತರಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರ ನೀಡಲು ಉದ್ದೇಶಿಸಲಾಗಿದೆ. ವಾರದೊಳಗೆ ಪರಿಹಾರ ಪಾವತಿಸಲು ಅಧಿಕಾರಿಗಳು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮೊಬೈಲ್ ಕೇಂದ್ರ ಸರಕಾರದ್ದು ಎನ್ನುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಹೇಳಿಕೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದ ತೆರಿಗೆಯಲ್ಲಿ ಕೇಂದ್ರ ಪಾಲು ಪಡೆಯುವುದಿಲ್ಲವೇ? ಇದು ರಾಜಕೀಯ ಮಾಡುವ ವಿಷಯವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ ಮಾಡಿದರು. ಇಂತಹ ಯೋಜನೆಗಳು ಯಾವತ್ತೂ ಕೇಂದ್ರ ಮತ್ತು ರಾಜ್ಯ ಸರಕಾರದ 60:40ರ ಅನುಪಾತದಲ್ಲಿರುತ್ತವೆ. ಹಾಗೆಯೇ ರಾಜ್ಯ ಸರಕಾರದ ತೆರಿಗೆಯಲ್ಲೂ ಕೇಂದ್ರ ಸರಕಾರಕ್ಕೆ ಪಾಲು ಹೋಗುತ್ತದೆ. ರಾಜ್ಯ ಮತ್ತು ಕೇಂದ್ರದಲ್ಲಿ ಯಾವುದೇ ಪಕ್ಷದ ಸರಕಾರಗಳು ಅಧಿಕಾರದಲ್ಲಿರಲಿ, ಇಂತಹ ಯೋಜನೆಗಳಿಗೆ ಅವುಗಳು ತಮ್ಮದೇ ಆದ ಪಾಲನ್ನು ಭರಿಸುವುದು ಒಕ್ಕೂಟ ವ್ಯವಸ್ಥೆಯಲ್ಲಿ ನಡೆದು ಬಂದಿರುವ ಪದ್ಧತಿ ಎಂದರು. ರೈಲ್ವೆ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಕೇಂದ್ರ ಸರಕಾರದ ಯೋಜನೆಗಳೆಂದು ಹೇಳಲಾಗುತ್ತದೆ. ಹಾಗಂತ ಪೂರ್ಣ ಹಣವನ್ನು ಕೇಂದ್ರವೇ ಭರಿಸುವುದಿಲ್ಲ. ರಾಜ್ಯ ಸರಕಾರ ತನ್ನ ಪಾಲಿನ ಹಣವನ್ನೂ ನೀಡುತ್ತದೆ. ಹಾಗೆಯೇ ರಾಜ್ಯ ಸರಕಾರದ ಅನೇಕ ಯೋಜನೆಗಳಿಗೆ ಕೇಂದ್ರ ಸರಕಾರ ನೆರವು ನೀಡುತ್ತದೆ. ಹಾಗಂತ ಇದು ಕೇಂದ್ರ ಸರಕಾರದ ಯೋಜನೆ ಎನ್ನಲಾಗದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು ನೀಡಿದರು. ಕೇಂದ್ರ ಸರಕಾರ ಪೋಷಣ್ ಅಭಿಯಾನದ ಅಡಿಯಲ್ಲಿ ಅನುದಾನ ನೀಡಿದೆಯೇ ವಿನಃ ಇದೇನೂ ವಿಶೇಷ ಅನುದಾನವಲ್ಲ. ಇಷ್ಟು ವರ್ಷ ಶಾಸಕರಾಗಿರುವವರು ಯೋಜನೆಗಳ ಕುರಿತು ಮಾಹಿತಿ ಹೊಂದಿರಬೇಕಾಗುತ್ತದೆ ಎಂದು ಹೆಬ್ಬಾಳಕರ್ ಹೇಳಿದರು.

Spread the love ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮೊಬೈಲ್ ಕೇಂದ್ರ ಸರಕಾರದ್ದು ಎನ್ನುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ