Breaking News

ಗ್ಯಾರಂಟಿಗಳು ನಿಲ್ಲಲ್ಲ: ಅಶೋಕ್‌ಗೆ ಸಿಎಂ ತಿರುಗೇಟು

Spread the love

ಬೆಂಗಳೂರು: ವಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಮತ್ತೆ ವ್ಯಂಗ್ಯಾಸ್ತ್ರ ಪ್ರಯೋಗ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಶೋಕ್‌ ಆಗಾಗ ತಮ್ಮ ಅಜ್ಞಾನ ಪ್ರದರ್ಶನ ಮಾಡುತ್ತ ರಾಜ್ಯದ ಜನರಿಗೆ ಮನೋರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್‌ಗೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ ಸಂಶೋಧನೆ ಎಂದು ಟೀಕಿಸಿದ್ದಾರೆ.

 

ಜತೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ದೃಢವಾಗಿ ಹೇಳುವ ಮೂಲಕ ಎಲ್ಲ ಗೊಂದಲಗಳಿಗೆ ಅವರು ತೆರೆ ಎಳೆದಿದ್ದಾರೆ.

ಸಾಲ ಮಾಡಿ ಸಂಬಳ ಕೊಡುವ ದುಃಸ್ಥಿತಿಗೆ ನಮ್ಮ ಸರಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಹಾಸನಾಂಬೆಯ ದರ್ಶನ ಪಡೆದ ಶಿವರಾಜ್ ಕುಮಾರ್, ರಿಷಬ್ ಶೆಟ್ಟಿ ಕುಟುಂಬ

Spread the loveಹಾಸನ: ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಹತ್ತನೇ ದಿನ. ಇಂದೂ ಕೂಡಾ ಭಕ್ತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ