Breaking News

ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಕಲ್ಲೆದ್ದ ರಸ್ತೆಯಲ್ಲೇ ಮಕ್ಕಳ ನಡಿಗೆ!

Spread the love

ನ್ನಮ್ಮನ ಕಿತ್ತೂರು: ಕಾಲು ದಾರಿ ಮೇಲೆ ಮುಷ್ಟಿಗಾತ್ರದ ಚೂಪನೆಯ ಕಲ್ಲುಗಳು ಎದ್ದು ಕುಳಿತಿವೆ. ಸ್ಮಶಾನಕ್ಕೂ ಇದೇ ದಾರಿ ಅವಲಂಬನೆ. ಮಳೆಯಾದರೆ ಸಾಕು ಮನೆಯೊಳಗೆ ನೀರು ನುಗ್ಗಿ ಬದುಕೇ ಯಾತನಾಮಯ ಆಗುತ್ತದೆ.

ಇದು ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತಿಮ್ಮಾಪುರ ಗ್ರಾಮದ ಅಂಬೇಡ್ಕರ್ ಕಾಲೊನಿ ಮಕ್ಕಳು ಮತ್ತು ನಾಗರಿಕರ ಗೋಳು.

ಚನ್ನಮ್ಮನ ಕಿತ್ತೂರು: ಕಲ್ಲೆದ್ದ ರಸ್ತೆಯಲ್ಲೇ ಮಕ್ಕಳ ನಡಿಗೆ!

 

‘ಕಾಲೊನಿಯಿಂದ ಸುಮಾರು ಅರ್ಧ ಕಿ.ಮೀ ದೂರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಮಕ್ಕಳು ರಸ್ತೆ ಮೇಲೆ ಎದ್ದು ಕುಳಿತಿರುವ ಕಲ್ಲುಗಳನ್ನು ತಪ್ಪಿಸಿಕೊಳ್ಳುತ್ತ ಸಾಗಬೇಕು. ಕಾಲೊನಿಯಲ್ಲಿ ಯಾರಾದರೂ ಮೃತಪಟ್ಟರೆ ಇದೇ ದಾರಿಯಲ್ಲಿ ಸಾಗಿ, ಶಾಲೆ ಬಳಿಯ ಸ್ಮಶಾನಭೂಮಿ ತಲುಪಬೇಕು. ಹದಗೆಟ್ಟ ರಸ್ತೆಯಿಂದ ಮಕ್ಕಳು ಮತ್ತು ನಾಗರಿಕರಿಗೆ ತೀವ್ರ ತೊಂದರೆಯಾಗಿದೆ. ಜನಪ್ರತಿನಿಧಿಗಳು ಇಲ್ಲಿ ಉತ್ತಮ ರಸ್ತೆ ನಿರ್ಮಿಸಿಕೊಡಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.


Spread the love

About Laxminews 24x7

Check Also

ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರಾಜೀನಾಮೆ

Spread the loveಮುಂಬೈ: ಅತ್ಯಾಚಾರ ಆರೋಪಿ ಹಾಗೂ ಖ್ಯಾತ ಜ್ಯೋತಿಷಿ ಅಶೋಕ್‌ ಖಾರಟ್ ಜತೆಗಿನ ಫೋಟೋಗಳು ಬಹಿರಂಗವಾದ ಹಿನ್ನೆಲೆಯಲ್ಲಿ, ಅವರೊಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ