Breaking News

ರೇಣುಕಾಸ್ವಾಮಿ ಹತ್ಯೆ; ಕಠಿಣ ಶಿಕ್ಷೆಗೆ ಒತ್ತಾಯ

Spread the love

ಹುಬ್ಬಳ್ಳಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕುರಿತು ಸಮರ್ಪಕವಾಗಿ ತನಿಖೆ ನಡೆಸಿ, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆ ವತಿಯಿಂದ ಆಗ್ರಹಿಸಲಾಯಿತು.

ನಗರದ ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್‌ ಕಚೇರಿ ಸಿಬ್ಬಂದಿಗೆ ಸಂಘಟನೆಯ ಮುಖಂಡರು ಈ ಕುರಿತು ಬುಧವಾರ ಮನವಿ ಸಲ್ಲಿಸಿದರು.

ಹುಬ್ಬಳ್ಳಿ | ರೇಣುಕಾಸ್ವಾಮಿ ಹತ್ಯೆ; ಕಠಿಣ ಶಿಕ್ಷೆಗೆ ಒತ್ತಾಯ

ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ₹1 ಕೋಟಿ ಪರಿಹಾರ ನೀಡಬೇಕು. ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಯುವ ಘಟಕದ ಅಧ್ಯಕ್ಷ ನಿರಂಜನಯ್ಯ ಹಿರೇಮಠ, ಆಟೊ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಮೊದಲಾದವರಿದ್ದರು.

ಸಮತಾ ಸೇನಾ, ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳ ಖಂಡನೆ: ‘ಹುಬ್ಬಳ್ಳಿಯಲ್ಲಿ ನೇಹಾ ಮತ್ತು ಅಂಜಲಿ ಹತ್ಯೆ ನಡೆದಾಗ ಬೀದಿಗಿಳಿದು ಬೊಬ್ಬೆ ಹೊಡೆದ ಹಿಂದೂ ಸಂಘಟನೆಯರು ಈಗ ಎಲ್ಲಿ ಕಾಣೆಯಾದರು’ ಎಂದು ಸಮತಾ ಸೇನಾ, ವಿವಿಧ ದಲಿತ ಸಂಘ- ಸಂಸ್ಥೆಗಳ ಮಹಾಮಂಡಳ ಪ್ರಶ್ನಿಸಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ