Breaking News

ಅನೈತಿಕ ಚಟುವಟಿಕೆಗಳಿಗೆ ತಾಣವಾದ ಪಾಳು ಬಿದ್ದ ವಿದ್ಯಾರ್ಥಿ ವಸತಿ ನಿಲಯ!

Spread the love

ಹಿರೇಬಾಗೇವಾಡಿ: ಆರ್ಥಿಕವಾಗಿ, ಸಾಮಾಜಿಕವಾಗಿ, ಹಿಂದುಳಿದವರ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರವೂ ಸಾಕಷ್ಟು ಅನುದಾನವನ್ನು ಒದಗಿಸುತ್ತಿದ್ದು, ಹಲವಾರು ಯೋಜನೆಗಳನ್ನು ರೂಪಿಸಿ ಸಮುದಾಯದ ಪ್ರಗತಿಗೆ ಶ್ರಮಿಸುತ್ತಿದೆ. ಆದರೆ ಕೆಲ ಸಂದರ್ಭಗಳಲ್ಲಿ ಇಂಥಹ ಹಲವಾರು ಯೋಜನೆಗಳು ಕಾರಣಾಂತರಗಳಿಂದ ಇನ್ನೂ ತಳ ಸಮುದಾಯವನ್ನು ತಲುಪುವಲ್ಲಿ ತೀರಾ ವಿಳಂಬವಾಗುತ್ತಿದೆ.

 

ಸರ್ಕಾರಗಳು ಯಾವುದಾದರೂ ಅಷ್ಠೆ ! ಆಡಳಿತ ಶಾಹಿಯಲ್ಲಿನ ಜಿಡ್ಡುಗಳಾದ ಈ ಚಲತಾಹೈ ಎಂಬ ಧೋರಣೆ ಹಾಗು ಚುನಾಯಿತ ಜನಪ್ರತಿನಿಧಿಗಳ ಆಲಸೈತನಗಳೆ ಇದಕ್ಕೆ ಮುಖ್ಯ ಕಾರಣ ಎಂಬ ಆರೋಪಗಳು ತಳ ಸಮುದಾಯದ ವಲಯದಿಂದಲೇ ಕೇಳಿ ಬರುತ್ತಿವೆ. ಇದಕ್ಕೊಂದು ನಿದರ್ಶನವೇ ಇಲ್ಲಿನ ವಿದ್ಯಾರ್ಥಿ ವಸತಿ ನಿಲಯ !

07-08-1989 ರಲ್ಲಿ ನಿರ್ಮಾಣವಾದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಕ್ ಪೂರ್ವ ಬಾಲಕರ ವಿದ್ಯಾರ್ಥಿ ವಸತಿ ನಿಲಯದ ಕಟ್ಟಡವು ಯಾವಾಗಲೋ ಜೀರ್ಣಾವಸ್ಥೆಯ ಹಂತ ತಲುಪಿದ್ದು, ಸಾರ್ವಜನಿಕರ ಆಗ್ರಹದ ಮೇರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಕಳೆದ ವರ್ಷವೇ ಶಿಥಿಲಾಸ್ಥೆಯ ಈ ಕಟ್ಟಡವನ್ನು ನೆಲೆಸಮಗೊಳಿಸಲು ಲೋಕೋಪಯೋಗಿ ಇಲಾಖೆಗೆ ಶಿಫಾರಸ್ಸು ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಬೇರೆ ಖಾಸಗಿ ಕಟ್ಟಡದಲ್ಲಿ ಬಾಡಿಗೆ ಆಧಾರದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿದೆ.


Spread the love

About Laxminews 24x7

Check Also

ಮೊಹರಂ ಹಬ್ಬ‌ ಸಮೀಪ ಹಿನ್ನಲೆ, ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ ಮುಖಂಡರ ಸಭೆ

Spread the love ಮೊಹರಂ ಹಬ್ಬ‌ ಸಮೀಪ ಹಿನ್ನಲೆ, ಧಾರವಾಡದಲ್ಲಿ ಮೂರ್ತಿ ಪ್ರತಿಷ್ಠಾನ ಮುಖಂಡರ ಸಭೆ…. ಪೊಲೀಸ್ ಇಲಾಖೆಗೆ ಅಗತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ