Breaking News

ಪಿಎಸ್​ಐ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Spread the love

ಕಾರವಾರ, ಜೂನ್​ 15: ಪಿಎಸ್​ಐ (PSI) ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಭಾಸ್ಕರ್ ಬೋಂಡೆಲ್ಕರ್​​ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಉತ್ತರ ಕನ್ನಡ: ಪಿಎಸ್​ಐ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಉತ್ತರ ಕನ್ನಡ (Uttar Kannada) ಜಿಲ್ಲೆಯ ಜೋಯಿಡಾ (Joida) ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಅವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್​ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ​ದೂರು ನೀಡಿದ್ದರು.

ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್​ ಅವರಿಗೆ ಪಿಎಸ್​ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಪಿಎಸ್ಐ ಬಸವರಾಜ ಕಿರುಕಳಕ್ಕೆ ಬೇಸತ್ತು ಭಾಸ್ಕರ್​​ ರಾಮನಗರ ಬಿಟ್ಟು ಜೋಯಿಡಾದಲ್ಲಿ ಕೆಲಸಕ್ಕೆ ಸೇರಿದ್ದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ