Breaking News

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!

Spread the love

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!

 

ಬೆಳಗಾವಿ : ಶಾರ್ಟ್ ಸರ್ಕ್ಯೂಟ್ ನಿಂದ ಅಕ್ಕ ಪಕ್ಕದಲ್ಲಿ ಇದ್ದಂತಹ ಎರಡು ಮನೆಗಳು ಸುಟ್ಟು ಭಸ್ಮವಾಗಿದ್ದು ಮದುವೆಗೆ ಎಂದು ತಂದಿಟ್ಟದ 6 ಲಕ್ಷ ರೂಪಾಯಿ ನಗದು ಹಣ ಕೂಡ ಈ ವೇಳೆ ಸುಟ್ಟು ಬೂದಿಯಾಗಿರುವ ಘಟನೆ ಇಂದು ಬೆಳಗಾವಿಯ ಹೊಸೂರ ಹರಿಜನ ಗಲ್ಲಿಯಲ್ಲಿ ನಡೆದಿದೆ.

 

ಹೌದು ಬೆಳಗಾವಿಯ ಶಿವರಾಜ್ ಹೊಸೂರ ಹರಿಜನ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಅಶೋಕ್ ಮೊದಗೆ ಹಾಗೂ ಶಶಿಕಾಂತ ಮೊದಗೆ ಎಂಬುವವರಿಗೆ ಸೇರಿದ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಶಿವರಾಜ್ ಮೊದಗೆ ಮದುವೆ ಕಾರ್ಯಕ್ಕೆಂದು ದುಡ್ಡು ಮನೆಯಲ್ಲಿಟ್ಟಿದ್ದರು.

ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಮನೆ ಸದಸ್ಯರು ಮನೆಯಿಂದ ಹೊರ ಓಡಿ ಬಂದು ತಮ್ಮ ಪ್ರಾಣವನ್ನು ರಕ್ಷಿಸಿಕೊಂಡರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮನೆಯ ಪರಿಕರ ಹಾಗೂ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ದಳದಿಂದ ಬೆಂಕಿ ನಂದಿರುವ ಕಾರ್ಯ ನಡೆದಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.


Spread the love

About Laxminews 24x7

Check Also

ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲರೂ ಸಹಕರಿಸಿ: ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ವೀರಣ್ಣ ಚರಂತಿಮಠ

Spread the loveಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ