Breaking News

ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ

Spread the love

ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂಬುದಾಗಿ ನಟ ದರ್ಶನ್ ಪರ ವಕೀಲರು ಶಾಕಿಂಗ್ ಮಾಹಿತಿಯನ್ನು ಕೋರ್ಟ್ ನಲ್ಲಿ ಬಿಚ್ಚಿಟ್ಟಿದ್ದಾರೆ.

ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಹಚರರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು.

ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ

ಈ ಪ್ರಕರಣದ ವಿಚಾರಣೆ ಆರಂಭಗೊಂಡ ನಂತ್ರ, ನಟ ದರ್ಶನ್ ಪರ ವಕೀಲ ಅನಿಲ್ ಬಾಬು ಅವರು, ಎ.5, ಎ13 ಆರೋಪಿಗಳು ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು. ಎ.5 ನಂದೀಶ್, ಎ13 ಆರೋಪಿ ದೀಪಕ್ ಅವರು, ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು.

ಈ ಬಳಿಕ ಪವಿತ್ರಾ ಗೌಡ ಪರ ವಕೀಲರು ವಾದ ಮಂಡಸಿ, ಪವಿತ್ರಾ ಗೌಡರನ್ನು 6 ದಿನಗಳ ಕಾಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅನುಮತಿ ಪಡೆಯದೇ ಆರೋಪಿಗಳ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ರಿಮ್ಯಾಂಡ್ ಅರ್ಜಿ ನೀಡುತ್ತಿಲ್ಲ. ಈಗಾಗಲೇ 5 ದಿನ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಹೇಳಿಕೆಗಳು ಹೊರಗಡೆ ಸೋರಿಕೆಯಾಗುತ್ತಿದೆ ಎಂದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ