Breaking News

ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Spread the love

ಹುಬ್ಬಳ್ಳಿ: ಸರ್ಕಾರ ರಾಯಭಾರಿಗಳನ್ನಾಗಿ ನೇಮಿಸುವ ಮೊದಲು ಅವರ ಪೂರ್ವಾಪರಗಳನ್ನು ಸರಿಯಾಗಿ ವಿಚಾರ ಮಾಡಬೇಕು. ಹಿಂದಿನ ಸರ್ಕಾರ ದರ್ಶನ ಅವರನ್ನು ರಾಯಭಾರಿ ಮಾಡಿದ್ದು ತಪ್ಪು. ದರ್ಶನ್ ಈ ಹಿಂದೆಯೂ ಹಲ್ಲೆ ಮತ್ತಿತರ ಪ್ರಕರಣಗಳನ್ನು ಎದುರಿಸಿದವರು. ಇಷ್ಟೆಲ್ಲಾ ಆದಮೇಲೂ ಅವರನ್ನು ರಾಯಭಾರಿ ಮಾಡಿದ್ದು ತಪ್ಪು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ವ್ಯಾಜ್ಯಗಳ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿಮಾನಿಗಳು ಅತಿರೇಕದಿಂದ ವರ್ತಿಸುವುದನ್ನು ಚಿತ್ರರಂಗದ ನಾಯಕರು ನಿಯಂತ್ರಿಸಬೇಕು. ಚಿತ್ರನಟರನ್ನು, ಕ್ರೀಡಾಲೋಕದವರನ್ನು ಬಳಸಿಕೊಂಡು ಜಾಗೃತಿ ಮೂಡಿಸುವುದು ಒಳ್ಳೆಯದು. ಆದರೆ ಮಾಡುವ ಮೊದಲು ಅವರ ಬಗ್ಗೆ ಪೂರ್ಣ ಮಾಹಿತಿ, ಹಿನ್ನೆಲೆ ಗಮನಿಸಿ ಮಾಡಬೇಕು. ಎಲ್ಲವೂ ಗೊತ್ತಿದ್ದರೂ ದರ್ಶನ ಅವರನ್ನು ರಾಯಭಾರಿಯನ್ನಾಗಿ ಮಾಡಿದವರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ