Breaking News

ಜಮೀನಿಗೆ ಹೋದಾಗಲೇ ಘೋರ ದುರಂತ: ವಿದ್ಯುತ್ ತಂತಿ ತಗುಲಿ ರೈತ, ಎತ್ತು ಸಾವು

Spread the love

ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಹಾಗೂ ಎತ್ತು ಮೃತಪಟ್ಟ ಘಟನೆ ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ.

ಬಸವರಾಜ(38) ಮೃತಪಟ್ಟ ರೈತ ಎಂದು ಹೇಳಲಾಗಿದೆ. ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ವಿದ್ಯುತ್ ಪ್ರವಹಿಸಿ ಎತ್ತು ಹಾಗೂ ರೈತ ಬಸವರಾಜ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ದೊಡ್ಡನಗೌಡ ಪಾಟೀಲ ಕೂಡ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ