Breaking News

ಮೂಡಲಗಿ | ಕಾರು ಡಿಕ್ಕಿ: ಬಾಲಕ ಸಾವು

Spread the love

ಮೂಡಲಗಿ: ತಾಲ್ಲೂಕಿನ ನಾಗನೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಮೀಪ ಸೋಮವಾರ ಮೂಡಲಗಿ- ಗೋಕಾಕ ರಾಜ್ಯ ಹೆದ್ದಾರಿ ಮೇಲೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟಿದ್ದಾನೆ.

ನಾಗನೂರಿನ ಲಕ್ಷ್ಮಣ ಕೆಂಚನವರ ಅವರ ಪುತ್ರ ವಿನಾಯಕ (8) ಅಪಘಾತಕ್ಕೆ ಬಲಿಯಾದ ಬಾಲಕ.

ರಾಯಬಾಗ ತಾಲ್ಲೂಕಿನ ಆಲಕನೂರು ಗ್ರಾಮದ, ಚಾಲಕ ದೇವಪ್ಪ ಅರ್ಜುನ ಯಲ್ಲಟ್ಟಿ ಅಪಘಾತಪಡಿಸಿದ ಆರೋಪಿ.

ನಾಗನೂರು ಕಡೆಯಿಂದ ಗೋಕಾಕ ಮಾರ್ಗವಾಗಿ ಕಾರ್‌ ವೇಗವಾಗಿ ಸಂಚರಿಸುತ್ತಿತ್ತು. ಬಾಲಕ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟುತ್ತಿದ್ದ. ಆಗ ಚಾಲಕನ ನಿಯಂತ್ರಣಕ್ಕೆ ಬಾರದೇ ಕಾರು ಬಾಲಕನಿಗೆ ಗುದ್ದಿತು. ಬಾಲಕನ ತಲೆ ಹಾಗೂ ಪಕ್ಕೆಲುಬುಗಳಿಗೆ ತೀವ್ರ ಗಾಯಗಳಾದವು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ