ಬೆಳಗಾವಿ- ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ,ಕನ್ನಡಪರ ಸಂಘಟನೆಗಳ ಕುರಿತು ರೋಲ್ ಕಾಲ್ ಸಂಘಟನೆಗಳೆಂದು ಹೇಳಿಕೆ ನೀಡಿ ಅವಮಾನಿಸಿರುವದನ್ನು ಖಂಡಿಸಿ,ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟಿಸಿದರು.
ಕನ್ನಡ ಪರ ಸಂಘಟನೆಗಳ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ನೀಡಿರುವದನ್ನು ವಿರೋಧಿಸಿ.
ಬೆಳಗಾವಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ಮಾಡಲಾಯಿತು. ಬೆಳಗಾವಿಯ ಅಶೋಕ ಸರ್ಕಲ್ ನಲ್ಲಿ ಬಸನಗೌಡ ಪಾಟೀಲ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯೆಕ್ತಪಡಿಸಿದರು.