Breaking News
Home / ರಾಜಕೀಯ / ಎರಡು ಕರಡಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ಎರಡು ಕರಡಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

Spread the love

ಕಂಪ್ಲಿ (ಬಳ್ಳಾರಿ): ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಕರಡಿಗಳು ಕಾಣಿಸಿಕೊಂಡಿದ್ದು, ಅವುಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭವಾಗಿದೆ.

ಗ್ರಾಮದ ಅಮರೇಗೌಡ ಅವರು ವಾಯು ವಿಹಾರಕ್ಕೆ ತೆರಳಿದಾಗ ತುಂಗಾಭದ್ರಾ ಬಲದಂಡೆಯ ಕೆಳಮಟ್ಟದ ಕಾಲುವೆ ಬಳಿ ಎರಡು ಕರಡಿಗಳು ಕಾಣಿಸಿಕೊಂಡಿವೆ.

ತಕ್ಷಣ ಗ್ರಾಮಕ್ಕೆ ಮರಳಿದ ಅವರು ವಿಷಯ ತಲುಪಿಸಿದ್ದಾರೆ.

ಬಳಿಕ ಎರಡು ಕರಡಿಗಳು ಗ್ರಾಮದಲ್ಲೂ ಕಾಣಿಸಿಕೊಂಡಿವೆ. ಗ್ರಾಮಸ್ಥರು ಗಲಾಟೆ ಮಾಡಿದ್ದರಿಂದ ಒಂದು ದೇವಸಮುದ್ರ-ಕಂಪ್ಲಿ ಸಂಪರ್ಕಿಸುವ ಕ್ರಾಸ್ ಕಡೆ ಓಡಿ ಹೋಗಿದೆ.ಕಂಪ್ಲಿ  | ಎರಡು ಕರಡಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ಮತ್ತೊಂದು ಕರಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ, ತುರಮಂದಿ ಬಸವೇಶ್ವರ ದೇವಸ್ಥಾನದ ಕಡೆಗೆ ಓಡಿ ಹೋಗಿದೆ. ಜನರ ಗುಂಪು ಅಲ್ಲಿಂದ ಚದುರಿಸಲು ಪ್ರಯತ್ನಿಸಿದಾಗ ಗ್ರಾಮದ ಹೊರ ವಲಯದ ಗೋದಾಮು ಬಳಿ ಬೇಲಿಯಲ್ಲಿ ಅವಿತು ಕುಳಿತಿದೆ.

ಈ ವಿಷಯವನ್ನು ಗ್ರಾಮದ ಹೊನ್ನುರಪ್ಪ ಇತರರು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ.

ಕರಡಿ ಅವಿತಿರುವ ಸ್ಥಳದಲ್ಲಿ ಗ್ರಾಮಸ್ಥರು ಜಮಾಯಿಸಿದ್ದು, ಅವರನ್ನು ಸಿಬ್ಬಂದಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಹೊಸಪೇಟೆ ವಲಯ ಅರಣ್ಯ ಅಧಿಕಾರಿ ಭರತ್ ರಾಜ್ ತಂಡದವರು ಕರಡಿ ಸೆರೆಗಾಗಿ ಸದ್ಯ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಜೂನ್ 13ರಂದು ತಾಲ್ಲೂಕಿನ ಜವುಕು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣಕ್ಕೆ ಕರಡಿ ಪ್ರವೇಶಿಸಿ ಕೆಲ ಕಾಲ ಆತಂಕ ಮೂಡಿಸಿತ್ತು.


Spread the love

About Laxminews 24x7

Check Also

ಬುಧವಾರ ಮತ್ತೆ ಎರಡು ಅನಧಿಕೃತ ಆಸ್ಪತ್ರೆ ಸೀಜ್

Spread the loveಚನ್ನಮ್ಮನ ಕಿತ್ತೂರು : ಮಕ್ಕಳ ಮಾರಾಟ ಹಾಗೂ ಭ್ರೂಣ ಹತ್ಯೆ ಪ್ರಕರಣದ ಬೆನ್ನಲೇ ಕಿತ್ತೂರಿನಲ್ಲಿ ಬುಧವಾರ ಮತ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ