Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Spread the love

ಚಿಕ್ಕೋಡಿ: ನೀರಿಲ್ಲದ 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ ಜೀವದಾನ ನಿಡಿದ್ದಾರೆ.

 

ಚಿಕ್ಕೋಡಿ ನಗರದ ವಾಡ ಗಲ್ಲಿಯ ಶ್ರೀನಿವಾಸ್ ದೊಡಮನಿ ಅವರ ಸುಮಾರು 40 ಅಡಿ ಆಳದ ಬಾವಿಯಲ್ಲಿ ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಬೆಕ್ಕು ಕಾಲು ಜಾರಿ ಬಿದ್ದಿದೆ.

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಹೀಗಾಗಿ ದೊಡಮನಿ ಮನೆಯವರು ಚಿಕ್ಕೋಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಬೆಕ್ಕನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ. ಅದರಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಗೆ ಇಳಿದು ಬೆಕ್ಕನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಇದರಿಂದ ಅಗ್ನಿಶಾಮಕ ದಳದ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

 

ಈ ಸಂದರ್ಭದಲ್ಲಿ ದೊಡಮನಿ ಕುಟುಂಬ ಹಾಗೂ ಚಿಕ್ಕೋಡಿ ಅಗ್ನಿಶಾಮಕ ಠಾಣಾಧಿಕಾರಿ ಅನುರಾಗ್ ಬಿ.ಎಲ್., ಅಗ್ನಿಶಾಮಕ ಪ್ರಾಮುಖ ರಾಚಯ್ಯ ಮಠಪತಿ, ಎಸ್.ಎನ್.ನಾಗ ಊರಿ, ರಾಜೇಂದ್ರ ಪಾಟೀಲ್, ಧೀರ ಗವಿ, ಬಸು ಹಿರೇಗೌಡರ್, ಹೈದರ್ ಅಲಿ ಮುಲ್ತಾನಿ.ಮಂಜು ಸನದಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಾರಾಟಕ್ಕೆ ಇಟ್ಟಿದ್ದ ಮಗು ಸಾವು

Spread the love ಬೆಳಗಾವಿ: ಮಾರಾಟಕ್ಕೆ ಒಳಗಾಗುವುದನ್ನು ತಪ್ಪಿಸಿ, ರಕ್ಷಿಸಲಾಗಿದ್ದ ಹೆಣ್ಣು ಮಗು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣುಮಗು ಗುರುವಾರ (ಜೂನ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ