Breaking News

ಕನ್ನಡ ಶಿಕ್ಷಕರ ನೇಮಕವೇ ಆಗಿಲ್ಲ !ಚಕಾರ ಎತ್ತದ ಕರ್ನಾಟಕ ಗಡಿಯ ಶಾಸಕರು

Spread the love

ಬೆಳಗಾವಿ: ಕರ್ನಾಟಕದ ಗಡಿಭಾಗದಲ್ಲಿ ರುವ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುತ್ತಿರುವ ಮಹಾರಾಷ್ಟ್ರ ಸರಕಾರವು ಸದ್ದಿಲ್ಲದೆ ಇನ್ನೊಂದು ಪಿತೂರಿ ಮಾಡುತ್ತಿದೆ ಎಂದು ಆರೋಪಿಸ ಲಾಗಿದೆ. ಅದು ಕಳೆದ 15 ವರ್ಷಗಳಿಂದ ಕನ್ನಡ ಶಾಲೆಗಳಿಗೆ ಶಿಕ್ಷಕರ ನೇಮಕಾತಿಯನ್ನೇ ಮಾಡಿಲ್ಲ ಎನ್ನುವ ಸಂಗತಿ ಈಗ ಹೊರಬಿದ್ದಿದೆ.

Maharashtra ಕನ್ನಡ ಶಿಕ್ಷಕರ ನೇಮಕವೇ ಆಗಿಲ್ಲ !ಚಕಾರ ಎತ್ತದ ಕರ್ನಾಟಕ ಗಡಿಯ ಶಾಸಕರು

ಉರ್ದು ಭಾಷಾ ಶಿಕ್ಷಕರ ನೇಮಕಾತಿ ಮಾಡಿದ್ದು, ಕನ್ನಡ ಶಾಲೆಗಳಿಗೆ ಮಾತ್ರ ಅರ್ಹ ಶಿಕ್ಷಕರಿದ್ದರೂ ಮಹಾರಾಷ್ಟ್ರ ಸರಕಾರ ಅವರನ್ನು ಪರಿಗಣಿಸಿಲ್ಲ.

15 ವರ್ಷಗಳಿಂದ ಕನ್ನಡ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ಮಾಡಿಲ್ಲ. ಇದು ಗಡಿ ಭಾಗದ ಕನ್ನಡ ಶಾಲೆಗಳನ್ನು ಶಾಶ್ವತವಾಗಿ ಮುಚ್ಚುವ ಹುನ್ನಾರದ ಒಂದು ಭಾಗ ಎಂಬುದು ಅಲ್ಲಿನ ಕನ್ನಡ ಹೋರಾಟಗಾರರ ಅಸಮಾಧಾನ.
ಕರ್ನಾಟಕದಲ್ಲಿ ಮರಾಠಿ ಶಾಲೆಗಳಿಗೆ ಸೌಲಭ್ಯ ಗಳನ್ನು ಕಲ್ಪಿಸುತ್ತಿಲ್ಲ, ಶಿಕ್ಷಕರ ಕೊರತೆ ಇದೆ ಎಂದೆಲ್ಲ ಆರೋಪ ಮಾಡುವ ಮಹಾರಾಷ್ಟ್ರ ಸರಕಾರವು ತನ್ನ ಗಡಿಯ ಸರಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಚಕಾರ ಎತ್ತುತ್ತಿಲ್ಲ. ಕನ್ನಡ ಶಾಲೆಗಳಿಗೆ ಮರಾಠಿ ಮಾಧ್ಯಮ ಶಿಕ್ಷಕರ ನೇಮಕ ಏಕೆ ಎನ್ನುವ ಪ್ರಶ್ನೆಗೆ ಅದರ ಬಳಿ ಉತ್ತರ ಇಲ್ಲ.

ಗಡಿಭಾಗದ ಕನ್ನಡ ಶಾಲೆಗಳ ಶಿಕ್ಷಕರ ನೇಮಕಾತಿ ವಿಷಯ ಸಾಕಷ್ಟು ವಿವಾದಕ್ಕೆ ಎಡೆಮಾಡಿಕೊಟ್ಟಿದ್ದರೂ ಮಹಾರಾಷ್ಟ್ರ ಗಡಿಯ ಕರ್ನಾಟಕದ ಜಿಲ್ಲೆಗಳ ಶಾಸಕರ್ಯಾರೂ ಇದರ ಬಗ್ಗೆ ಆಕ್ಷೇಪ ಎತ್ತಿಲ್ಲ. ಸರಕಾರದ ಮೇಲೆ ಒತ್ತಡ ತರುವ ಕೆಲಸಕ್ಕೆ ಮುಂದಾಗಿಲ್ಲ.

 


Spread the love

About Laxminews 24x7

Check Also

ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ

Spread the love ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ ಬಸವರಾಜ ಕಟ್ಟಿಮನಿ ಕಾದಂಬರಿ ಪ್ರಶಸ್ತಿ ಪ್ರದಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ