Breaking News

ರೇಣುಕಾಸ್ವಾಮಿ ಕೊಲೆ ಪ್ರಕರಣ: 40 ಲಕ್ಷ ರೂಪಾಯಿ ಕೈ ಸಾಲ ಕೊಟ್ಟ ಮೋಹನ್‌ರಾಜ್‌ ನಾಪತ್ತೆ!

Spread the love

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮುಚ್ಚಿ ಹಾಕಲು ದರ್ಶನ್ ಏನೆಲ್ಲಾ ಮಾಡಲು ಯತ್ನಿಸಿದ್ದರು ಎಂಬ ಸ್ಪೋಟಕ ವಿಚಾರ ಬಯಲಾಗಿದೆ. ಮೊನ್ನೆಯಷ್ಟೇ ಆರ್​ಆರ್​ ನಗರದಲ್ಲಿರುವ ನಟ ದರ್ಶನ್ ಮನೆಯಲ್ಲಿ ಮತ್ತೆ 37 ಲಕ್ಷದ 40 ಸಾವಿರ ಹಣವನ್ನು, ಪತ್ನಿ ವಿಜಯಲಕ್ಷ್ಮಿ ಬಳಿಯಿಂದ 3 ಲಕ್ಷ ರೂ.ಹಣವನ್ನು ಸೀಜ್ ಮಾಡಲಾಗಿದೆ.

ದರ್ಶನ್ ಮನೆಯ ಬೆಡ್ ರೂಮ್ ನಲ್ಲಿ ಕಬೋಡ್ ನಲ್ಲಿ 37 ಲಕ್ಷ ಹಣ ಸೀಜ್ ಆಗಿದೆ ಎಂದು ವರದಿ ಆಗಿದೆ. ಬ್ಯಾಗ್ ಒಳಗೆ ಇದ್ದ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರಂತೆ. ಅಷ್ಟೇ ಅಲ್ಲದೇ ವಿಜಯಲಕ್ಷ್ಮಿ ಇರುವ ಅಪಾರ್ಟ್ ಮೆಂಟ್ ನಲ್ಲೂ ಪೊಲೀಸರು 3 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ ಎಂದು ವರದಿ ಆಗಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣ: 40 ಲಕ್ಷ ರೂಪಾಯಿ ಕೈ ಸಾಲ ಕೊಟ್ಟ ಮೋಹನ್‌ರಾಜ್‌ ನಾಪತ್ತೆ!

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಹೇಳದಂತೆ ಡೀಲ್ ಕೂಡ ಮಾಡಿದ್ದರಂತೆ. ಡೀಲ್ ಗಾಗಿ ನೀಡಿದ್ದ 30 ಲಕ್ಷ ರೂ. ಹಣವನ್ನು ಈ ಹಿಂದೆಯೇ ಪೊಲೀಸರು ಸೀಜ್ ಮಾಡಿದ್ದರು ಎಂದು ವರದಿ ಆಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೂ 70 ಲಕ್ಷದ 40 ಸಾವಿರ ಹಣವನ್ನು ಸೀಜ್ ಮಾಡಿದ್ದಾರೆ ಎನ್ನಲಾಗ್ತಿದೆ.

ಈ ಹಣದ ಬೆನ್ನತ್ತಿದ್ದ ಪೊಲೀಸರಿಗೆ, ಶಾಸಕರೊಬ್ಬರ ಆಪ್ತನ ಲಿಂಕ್ ಪತ್ತೆಯಾಗಿದೆ. ತಮ್ಮ ಆಪ್ತ ಮೋಹನ್‌ರಾಜ್ ಎನ್ನುವವರ ಬಳಿ ದರ್ಶನ್ 40 ಲಕ್ಷ ರೂಪಾಯಿ ಕೈಸಾಲ ಮಾಡಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ಇದರ ಬೆನ್ನಲ್ಲೇ ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ. ವಿಚಾರಣೆ ಮುಂದಾಗುತ್ತಿದ್ದಂತೆ ಮೋಹನ್‌ರಾಜ್ ಮೊಬೈಲ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ದರ್ಶನ್‌ಗೆ ಈ ಹಣ ನೀಡುವಾಗ ಮೋಹನ್‌ರಾಜ್‌ಗೆ ಕೊಲೆ ವಿಚಾರ ಗೊತ್ತಾಗಿತ್ತಾ ಇಲ್ವಾ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಒಂದೊಮ್ಮೆ ಕೊಲೆ ಪ್ರಕರಣ ಮೊದಲೇ ಗೊತ್ತಿತ್ತು ಎನ್ನುವುದಾದ್ರೆ ಮೋಹನ್‌ರಾಜ್‌ಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.


Spread the love

About Laxminews 24x7

Check Also

88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ

Spread the love88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ