Breaking News

ಸಿದ್ದರಾಮಯ್ಯ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ: ಯತ್ನಾಳ್

Spread the love

ವಿಜಯಪುರ: ರಾಜ್ಯದಲ್ಲಿ ಸಿದ್ಧರಾಮಯ್ಯ ಸರ್ಕಾರ ಬ್ರಿಟೀಷ್ ಮಾದರಿಯಲ್ಲಿ ತೆರಿಗೆ ಹೇರುತ್ತಿದೆ. ಬ್ರಿಟೀಷರು ಉಪ್ಪಿನ ಮೇಲೆ ತರಿಗೆ ಹೇರಿದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ತೆರಿಗೆ ವಿಧಿಸುತ್ತಿದೆ. ಆಡಳಿತ ವೈಪಲ್ಯದ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿದ್ಧರಾಮಯ್ಯ ಚುನಾವಣೆ ಎದುರಿಸಬೇಕು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.

Vijayapura; ಸಿದ್ದರಾಮಯ್ಯ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ: ಯತ್ನಾಳ್

ಶನಿವಾರ ರಾಜ್ಯ ಸರ್ಕಾರದ ಇಂಧನ ದರ ಏರಿಕೆ ವಿರೋಧಿಸಿ ಬಿಜೆಪಿ ನಗರದ ಹೊರ ವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನಗಳನ್ನು ವಾಸ್ತವವಾಗಿ ಅನುಷ್ಠಾನ ಮಾಡುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದರು.

ಸರ್ಕಾರದ ಖಜಾನೆ ಖಾಲಿಯಾಗಿದ್ದರೂ ಈಗ ಗ್ಯಾರಂಟಿ ಬಂದ್ ಮಾಡಿದರೆ ಅಪಾಯ ಎಂದು ಮುಂದುವರೆಸಿದ್ದಾರೆ ಎಂದು ಕುಟುಕಿದ ಯತ್ನಾಳ, ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಲಾಭ ಎಂದು ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ಹೇಳಿದ್ದಾರೆ. ಹಾಗಾದರೆ ಕೇವಲ ಮಹಿಳೆಯರಿಗೆ ಮಾತ್ರ ಗ್ಯಾರಂಟಿ ನೀಡಿದರೆ ಸಾಲದು. ಬಿಪಿಎಲ್ ಕಾರ್ಡ್ ಹೊಂದಿರುವ ಪುರುಷರಿಗೂ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಲಿ ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ