Breaking News

ಖಾನಾಪುರ: ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

Spread the love

ಖಾನಾಪುರ: ಪಟ್ಟಣದ ಹೊರವಲಯದ ಬೆಳಗಾವಿ ರಸ್ತೆಯ ಮರೆಮ್ಮ ದೇವಾಲಯದ ಬಳಿ ಶುಕ್ರವಾರ ರಾತ್ರಿ ಲಾರಿ ಹಿಂದಿನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಹಲಕರ್ಣಿ ನಿವಾಸಿ ಸಂಜು ಮಲ್ಲಪ್ಪ ಸತನಾಯ್ಕ (35) ಮೃತರು. ಪಟ್ಟಣದಿಂದ ಬೆಳಗಾವಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಲಾರಿಯನ್ನು ಓವರ್‌ಟೇಕ್ ಮಾಡಲು ಹೀಗಿ, ಎದುರಿಗೆ ಬಂದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು, ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಮತ್ತೊಂದು ಬೈಕ್‌ನಲ್ಲಿದ್ದ ಗಂಗವಾಳಿ ಗ್ರಾಮದ ತುಕಾರಾಮ ಸುತಾರ ಮತ್ತು ಅವರ ಪತ್ನಿ ಸಾರಿಕಾ ಅವರಿಗೆ ಗಾಯಗಳಾಗಿವೆ.

ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಿಜೆಪಿಗೆ ಈಶ್ವರಪ್ಪ ಕರೆತರಲು ಯತ್ನಿಸಿಲ್ಲ: ರಮೇಶ ಜಾರಕಿಹೊಳಿ

Spread the love ಬೆಳಗಾವಿ: ‘ನಾನು ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಕೆ.ಎಸ್.ಈಶ್ವರಪ್ಪ ಅವರನ್ನು ಮತ್ತೆ ಬಿಜೆಪಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ