Breaking News

ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆ

Spread the love

ಚಿಕ್ಕಬಳ್ಳಾಪುರ: ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರೆಪಲ್ಲಿ ಎಂಬಲ್ಲಿ ನಡೆದಿದೆ35 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ. ಕೊಲೆಯ ಬಳಿಕ ಆರೋಪಿ ಆದಿನಾರಾಯಣಪ್ಪ ಪರಾರಿಯಾಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನು. ಮಧ್ಯಾಹ್ನ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ.

ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ದಂಪತಿಗೆ ಮೂರು ಮಕ್ಕಳು ಇವೆ.

ಪರಾರಿಯಾಗಿರುವ ಆರೋಪಿಯನ್ನ ಬಂಧಿಸಲಾಗುವುದು. ಶವ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

UP Election 2027 | 50% ಸ್ಥಾನಗಳಲ್ಲಿ ಬ್ರಾಹ್ಮಣ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಬಿಎಸ್‌ಪಿ ಪ್ಲ್ಯಾನ್‌

Spread the loveಲಕ್ನೋ: ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಸುಮಾರು 50% ಸ್ಥಾನಗಳಲ್ಲಿ ಬ್ರಾಹ್ಮಣ ಅಭ್ಯರ್ಥಿಗಳನ್ನ ಕಣಕ್ಕಿಳಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ