Breaking News
Home / ರಾಜಕೀಯ / ಪಾರಿವಾಳಗಳ ಹಿಕ್ಕೆಯಿಂದ ಮೈಸೂರು ಅರಮನೆಗೆ ಕಂಟಕ:

ಪಾರಿವಾಳಗಳ ಹಿಕ್ಕೆಯಿಂದ ಮೈಸೂರು ಅರಮನೆಗೆ ಕಂಟಕ:

Spread the love

ಮೈಸೂರು, ಜೂನ್​​ 28: ಸಾಂಸ್ಕೃತಿಕ ನಗರಿ ಮೈಸೂರು (Mysore) ಅರಮನೆಗೆ (Mysore Palace) ಹೆಸರುವಾಸಿ. ವಿಶ್ವವಿಖ್ಯಾತ ಮೈಸೂರು ಅರಮನೆಗೆ ಪಾರಿವಾಳಗಳ (Pigeon) ಹಿಕ್ಕೆಯಿಂದ ಕಂಟಕ ಎದುರಾಗಿದೆ. ಪಾರಿವಾಳಗಳು ಹಾಕುವ ಹಿಕ್ಕೆಯಲ್ಲಿ, ಯೂರಿಕ್ ಆ್ಯಸಿಡ್‌ (Uric Acid) ಇರುತ್ತದೆ. ಯೂರಿಕ್​ ಆಸ್ಯಡಿನಿಂದ ಕೂಡಿರುವ ಈ ಹಿಕ್ಕೆಗಳು ಪಾರಂಪರಿಕ ಕಟ್ಟಡಗಳ ಮೇಲೆ ಬೀಳುವುದರಿಂದ, ಕಟ್ಟಡಗಳು ವಿರೂಪಗೊಳ್ಳುತ್ತವೆ‌ ಎಂದು ಇತಿಹಾಸ ತಜ್ಞ ಪ್ರೋ. ರಂಗರಾಜು ಹೇಳಿದ್ದಾರೆ.

ಪ್ರೋ. ರಂಗರಾಜು, ಈ ಹಿಕ್ಕೆಗಳನ್ನು ತಾಮ್ರ ಅಥವಾ ಸ್ಟೀಲ್​ ಪಾತ್ರೆಯಲ್ಲಿ ಹಾಕಿ ಕೆಲವು ದಿನಗಳು ಬಿಟ್ಟರೆ, ರಂಧ್ರ ಬೀಳುತ್ತದೆ. ಮೈಸೂರಿನ ಹತ್ತನೇ ಚಾಮರಾಜ ವೃತ್ತ ಮತ್ತು ನಾಲ್ವಡಿ ಕೃಷ್ಣರಾಜ ವೃತ್ತಗಳನ್ನು ಮಾರ್ಬಲ್​ ಕಲ್ಲಿನಿಂದ ಮಾಡಲಾಗಿದೆ. ಈ ವೃತ್ತದಲ್ಲಿ ಪಾರಿವಾಳಗಳು ಹಿಕ್ಕೆ ಹಾಕುವುದರಿಂದ ಮಾರ್ಬಲ್​ಗೆ ಹಾನಿಯಾಗಲಿದೆ. ಈ ಹಿಕ್ಕೆಗಳಿಂದ ಅರಮನೆಗೆ ಬಹಳ ಮಾರಕವಾಗಲಿದೆ ಎಂದರು.

ಹೀಗಾಗಿ, ಅರಮನೆ, ಈ ವೃತ್ತಗಳ ಬಳಿ ಪಾರಿವಾಳಗಳಿಗೆ ಕಾಳು ಹಾಕುವುದನ್ನು ತಡೆಯಬೇಕು. ಈ ಬಗ್ಗೆ ಅನೇಕರು ಧ್ವನಿ ಎತ್ತಿದ್ದಾರೆ. ಈ ಪಾರಿವಾಳಗಳು ಅರಮನೆ, ರಾಜರ ವೃತ್ತಗಳಿಂದ ದೂರ ಹೋಗುವಂತೆ ಮಾಡಬೇಕು. ಪಾರಿವಾಳಗಳು ದೂರ ಹೋಗಬೇಕೆಂದರೆ ಕಾಳುಗಳನ್ನು ಹಾಕುವುದು ನಿಲ್ಲಿಸಬೇಕು. ಕೆಲವರೊಂತು ಪಾರಿವಾಳಗಳಿಗೆ ಹಾಕುವ ಕಾಳುನ್ನು ಅರಮನೆ ಅಕ್ಕ-ಪಕ್ಕ ಮಾರಾಟ ಮಾಡಲು ಆರಂಭಿಸಿದ್ದಾರೆ. ಇದನ್ನೂ ತಡೆಯಬೇಕು. ಅರಮನೆ ಸೇರಿ ಪಾರಂಪರಿಕ ಕಟ್ಟಡದ ರಕ್ಷಣೆಗೆ ಕ್ರಮ ವಹಿಸುವಂತೆ ಮನವಿ ಮಾಡಿದರು


Spread the love

About Laxminews 24x7

Check Also

ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್‌ ಮಂಜುಳಾ ನಾಯಿಕ

Spread the love ಸಂಕೇಶ್ವರ: ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ರಭಸದಿಂದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಕೇಶ್ವರ ಪಟ್ಟಣದ ಹರಿಯುವ ಹಿರಣ್ಯಕೇಶಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ