Breaking News

ಸುಳ್ಳು ಅತ್ಯಾಚಾರ ಕೇಸ್ ಹಾಕಿದ್ದ 13 ಮಂದಿಗೆ ಮೂರುವರೆ ವರ್ಷ ಕಾರಾಗೃಹ ಶಿಕ್ಷೆ

Spread the love

ಬೆಳಗಾವಿ: ಹೆಸ್ಕಾಂ ಅಧೀಕ್ಷಕ ಅಭಿಯಂತರ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಹೆಸ್ಕಾಂ ಸಹಾಯಕ ಅಭಿಯಂತೆ ಸೇರಿ ಒಟ್ಟು ಜನ ಹೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೂರುವರೆ ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ ತಲಾ 86 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಎಲ್.

ವಿಜಯಲಕ್ಷ್ಮೀ ದೇವಿ ಅವರು ಗುರುವಾರ ಮಹತ್ವದ ತೀರ್ಪು ಪ್ರಕಟಿಸಿದರು.

Belagavi; ಸುಳ್ಳು ಅತ್ಯಾಚಾರ ಕೇಸ್ ಹಾಕಿದ್ದ 13 ಮಂದಿಗೆ ಮೂರುವರೆ ವರ್ಷ ಕಾರಾಗೃಹ ಶಿಕ್ಷೆ

ಮೈಸೂರಿನ ಬೆಸ್ಕಾಂ ಸಹಾಯಕ ಅಭಿಯಂತೆ ಬಿ.ವಿ. ಸಿಂಧು, ಹೆಸ್ಕಾಂ ಸಹಾಯಕ ಲೈನ್‌ಮ್ಯಾನ್ ನಾಥಾಜಿ ಪಾಟೀಲ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಅಜಿತ ಪೂಜಾರಿ, ಹೆಸ್ಕಾಂ ಸಹಾಯಕ ಲೈನ್‌ಮ್ಯಾನ್ ಮಲಸರ್ಜ ಶಹಾಪುರಕರ, ಕಿರಿಯ ಇಂಜಿನಿಯರ್ ಸುಭಾಸ ಹಲ್ಲೋಳ್ಳಿ, ಲೈನ್‌ಮ್ಯಾನ್ ಈರಪ್ಪ ಎಂ ಪತ್ತಾರ, ಮೇಲ್ವಿಚಾರಕ ಮಲ್ಲಿಕಾರ್ಜುನ ಎಸ್ ರೇಡಿಹಾಳ, ಹಿರಿಯ ಸಹಾಯಕ ಭೀಮಪ್ಪ ಎಲ್ ಗೋಡಲಕುಂದರಗಿ, ಹೆಸ್ಕಾಂ ಸ್ಟೇಷನ್ ಅಟೆಂಡರ್ ಗ್ರೇಡ್-2 ರಾಜೇಂದ್ರ ಹಳಿಂಗಳಿ, ಲೆಕ್ಕಾಧಿಕಾರಿ ಸುರೇಶ ಕಾಂಬಳೆ, ಲೈನ್‌ಮ್ಯಾನ್ ಈರಯ್ಯ ಗುರಯ್ಯ ಹಿರೇಮಠ, ಲೈನ್‌ಮ್ಯಾನ್ ಮಾರುತಿ ಭರಮಾ ಪಾಟೀಲ, ಹೆಸ್ಕಾಂ ನಿವೃತ್ತ ಸಹಾಯಕಿ ದಾಕ್ಷಾಯಣಿ ಮಹಾದೇವ ನೇಸರಗಿ ಎಂಬವರಿಗೆ ಮೂರುವರೆ ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯ ಹೆಸ್ಕಾಂ ಅಧೀಕ್ಷಕ ಅಭಿಯಂತರಾಗಿದ್ದ ತುಕಾರಾಮ ಮಜ್ಜಗಿ ಅವರ ವಿರುದ್ಧ 19 ನವೆಂಬರ್ 2014ರಲ್ಲಿ ಮೊದಲನೇ ಆರೋಪಿ ಬಿ.ವಿ. ಸಿಂಧು ಒಳಸಂಚು ರೂಪಿಸಿ ಮಾಳಮಾರುತಿ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ತನಿಖಾಧಿಕಾರಿಗಳು ತನಿಖೆ ಕೈಗೊಂಡು ಬಿ ಅಂತಿಮ ವರದಿ ಸಲ್ಲಿಸಿದ್ದು, ನಂತರ ಮಜ್ಜಿಗಿ ಅವರು ದೂರು ಹಿಂಪಡೆಯಲು ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಿಂಧು ಮತ್ತೊಂದು ದೂರು ನೀಡಿದ್ದರು. ಬಳಿಕ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಲು ಮಜ್ಜಗಿಯವರೇ ಕಾರಣ ಎಂಬುದಾಗಿ ಮೂರನೇ ದೂರು ನೀಡಿದ್ದರು. ಈ ಕೇಸಿನಲ್ಲಿ 9 ದಿನಗಳ ಕಾಲ ಮಜ್ಜಗಿ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿತ್ತು.


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ