Breaking News

ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್‌ ಮಂಜುಳಾ ನಾಯಿಕ

Spread the love

ಸಂಕೇಶ್ವರ: ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ರಭಸದಿಂದ ಮಳೆಯಾಗುತ್ತಿರುವ

ಹಿನ್ನಲೆಯಲ್ಲಿ ಸಂಕೇಶ್ವರ ಪಟ್ಟಣದ ಹರಿಯುವ ಹಿರಣ್ಯಕೇಶಿ ನದಿ ತುಂಬಿ ಹರಿಯುತಿದ್ದು ಭವಿಷ್ಯದಲ್ಲಿ ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ತಾಲ್ಲೂಕು ಆಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದ್ದು,

ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್‌ ಮಂಜುಳಾ ನಾಯಿಕ

ಹುಕ್ಕೇರಿ ತಹಶೀಲ್ದಾರ್‌ ಮಂಜುಳಾ ನಾಯಿಕ ಅವರು ಶನಿವಾರ ಸಂಕೇಶ್ವರಕ್ಕೆ ಭೇಟಿ ನೀಡಿ ಹಿರಣ್ಯಕೇಶಿ ನದಿಯ ನೀರಿನ ಮಟ್ಟ ವಿಕ್ಷಿಸಿದರು.

ಮುಂದಿನ ದಿನಗಳಲ್ಲಿ ಹಿರಣ್ಯಕೇಶಿ ನದಿಗೆ ಹೆಚ್ಚು ನೀರು ಬಂದರೆ ನದಿ ಗಲ್ಲಿ, ಶಂಕರಲಿಂಗ ಮಠ, ಹೊಸ ಓಣಿಯ ತುಂಬ ನೀರು ಬರುವ ಸಾಧ್ಯತೆ ಇದ್ದು ಈಗಿನಿಂದಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಸ್ಥಳೀಯ ಪುರಸಭೆ ಸಿಬ್ಬಂದಿಗೆ ಸೂಚಿಸಿದರು.

ಈಗಾಗಲೇ ಸಂಕೇಶ್ವರ ಪುರಸಭೆ ವತಿಯಿಂದ ನದಿ ಪಾತ್ರದ ಇಕ್ಕೆಲಗಳಲ್ಲಿ ಆಳವಾಗಿ ತೆಗ್ಗು ತೆಗೆದು ಸ್ವಚ್ಛ ಮಾಡಲಾಗಿದೆ. ಜನರು ಪ್ರವಾಹ ಬರುವುದಕ್ಕಿಂತ ಮುಂಚೆಯೇ ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಲಾಗಿದೆ ಎಂದು ಪುರಸಭೆಯ ಸಿಬ್ಬಂದಿ ಹೇಳಿದರು.


Spread the love

About Laxminews 24x7

Check Also

ವಿರಾಟ ಹಿಂದೂ ಸಮ್ಮೇಳನ ಹಿನ್ನೆಲೆ: ಶ್ರೀ ಸಾಯಿ ಮಂದಿರದಲ್ಲಿ ಆಕರ್ಷಕ ರಂಗೋಲಿ ಸ್ಪರ್ಧೆ; 120ಕ್ಕೂ ಹೆಚ್ಚು ಮಹಿಳೆಯರು ಭಾಗಿ

Spread the love ವಿರಾಟ ಹಿಂದೂ ಸಮ್ಮೇಳನ ಹಿನ್ನೆಲೆ: ಶ್ರೀ ಸಾಯಿ ಮಂದಿರದಲ್ಲಿ ಆಕರ್ಷಕ ರಂಗೋಲಿ ಸ್ಪರ್ಧೆ; 120ಕ್ಕೂ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ