Breaking News
Home / ರಾಜಕೀಯ / ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್‌ ಮಂಜುಳಾ ನಾಯಿಕ

ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್‌ ಮಂಜುಳಾ ನಾಯಿಕ

Spread the love

ಸಂಕೇಶ್ವರ: ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ರಭಸದಿಂದ ಮಳೆಯಾಗುತ್ತಿರುವ

ಹಿನ್ನಲೆಯಲ್ಲಿ ಸಂಕೇಶ್ವರ ಪಟ್ಟಣದ ಹರಿಯುವ ಹಿರಣ್ಯಕೇಶಿ ನದಿ ತುಂಬಿ ಹರಿಯುತಿದ್ದು ಭವಿಷ್ಯದಲ್ಲಿ ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ತಾಲ್ಲೂಕು ಆಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದ್ದು,

ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್‌ ಮಂಜುಳಾ ನಾಯಿಕ

ಹುಕ್ಕೇರಿ ತಹಶೀಲ್ದಾರ್‌ ಮಂಜುಳಾ ನಾಯಿಕ ಅವರು ಶನಿವಾರ ಸಂಕೇಶ್ವರಕ್ಕೆ ಭೇಟಿ ನೀಡಿ ಹಿರಣ್ಯಕೇಶಿ ನದಿಯ ನೀರಿನ ಮಟ್ಟ ವಿಕ್ಷಿಸಿದರು.

ಮುಂದಿನ ದಿನಗಳಲ್ಲಿ ಹಿರಣ್ಯಕೇಶಿ ನದಿಗೆ ಹೆಚ್ಚು ನೀರು ಬಂದರೆ ನದಿ ಗಲ್ಲಿ, ಶಂಕರಲಿಂಗ ಮಠ, ಹೊಸ ಓಣಿಯ ತುಂಬ ನೀರು ಬರುವ ಸಾಧ್ಯತೆ ಇದ್ದು ಈಗಿನಿಂದಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಸ್ಥಳೀಯ ಪುರಸಭೆ ಸಿಬ್ಬಂದಿಗೆ ಸೂಚಿಸಿದರು.

ಈಗಾಗಲೇ ಸಂಕೇಶ್ವರ ಪುರಸಭೆ ವತಿಯಿಂದ ನದಿ ಪಾತ್ರದ ಇಕ್ಕೆಲಗಳಲ್ಲಿ ಆಳವಾಗಿ ತೆಗ್ಗು ತೆಗೆದು ಸ್ವಚ್ಛ ಮಾಡಲಾಗಿದೆ. ಜನರು ಪ್ರವಾಹ ಬರುವುದಕ್ಕಿಂತ ಮುಂಚೆಯೇ ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಲಾಗಿದೆ ಎಂದು ಪುರಸಭೆಯ ಸಿಬ್ಬಂದಿ ಹೇಳಿದರು.


Spread the love

About Laxminews 24x7

Check Also

ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Spread the love ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕಾಳಮ್ಮವಾಡಿ ಡ್ಯಾಂನಲ್ಲಿ ನಿಪ್ಪಾಣಿಯ ಯುವಕರಿಬ್ಬರು ನೀರುಪಾಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ