ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌: ಹೆಬ್ಬಾಳಕರ

Spread the love

ಬೆಳಗಾವಿ: ‘ತಮ್ಮ ಕೆಲಸಗಳಿಗೆ ಉತ್ತಮ ಮೊಬೈಲ್ ಅಗತ್ಯ ಎಂದು ಅಂಗನವಾಡಿ ಕಾರ್ಯಕರ್ತೆಯರು ಕಳೆದ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದರು. ಇದಕ್ಕೆ ಹಿಂದಿನ ಬಿಜೆಪಿ ಸರ್ಕಾರ ಸ್ಪಂದಿಸಿರಲಿಲ್ಲ. ನಾನು ಮುಖ್ಯಮಂತ್ರಿಗೆ, ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದರಿಂದ ಮೊಬೈಲ್‌ ಮಂಜೂರಾಗಿವೆ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದ್ದಾರೆ.

ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌: ಲಕ್ಷ್ಮಿ ಹೆಬ್ಬಾಳಕರ

‘ಮೊಬೈಲ್ ಮಂಜೂರು ಮಾಡಿದ್ದು ಕೇಂದ್ರ ಸರ್ಕಾರ’ ಎಂಬ ಶಾಸಕ ಅಭಯ ಪಾಟೀಲ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಕೇಂದ್ರ ಸರ್ಕಾರ ಪೋಷಣ್ ಅಭಿಯಾನದ ಅಡಿಯಲ್ಲಿ ಅನುದಾನ ನೀಡಿದೆಯೇ ವಿನಃ ಇದೇನೂ ವಿಶೇಷ ಅನುದಾನವಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ 60:40ರ ಅನುಪಾತದಲ್ಲಿ ಇದು ಮಂಜೂರಾಗಿದೆ. ಕೇಂದ್ರದ ಅನೇಕ ಯೋಜನೆಗಳಿಗೂ ರಾಜ್ಯ ಸರ್ಕಾರ ಪಾಲು ನೀಡುತ್ತದೆ. ಆದರೆ, ಯೋಜನೆ ಯಾವ ಸರ್ಕಾರದ ಮೂಲಕ ಜಾರಿಗೊಳ್ಳುತ್ತದೆ ಎನ್ನುವುದರ ಮೇಲೆ ಆ ಯೋಜನೆ ಯಾರದ್ದು ಎಂದು ಗುರುತಿಸಲ್ಪಡುತ್ತದೆ. ಹಾಗಾಗಿ, ಇದು ರಾಜ್ಯ ಸರ್ಕಾರದ ಯೋಜನೆಯಾಗಿದೆ’ ಎಂದಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ