Breaking News

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

Spread the love

ಬೆಳಗಾವಿ: ಆಸ್ತಿ ಕಬಳಿಸಲು ಮಾಟಮಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಷ್ಠಿತ ಉದ್ಯಮಿ ವಿಜಯ ಸಂಕೇಶ್ವರ ಅವರ ಪುತ್ರಿ ದೀಪಾ ಸಿದ್ನಾಳ ಅವರು ತಮ್ಮ ಕುಟುಂಬದ ಸದಸ್ಯರ ವಿರುದ್ಧವೇ ದೂರು ದಾಖಲಿಸಿದ್ದಾರೆ.

ಉದ್ಯಮಿ ಶಶಿಕಾಂತ ಸಿದ್ನಾಳ, ಪತ್ನಿ ವಾಣಿ ಸಿದ್ನಾಳ ಹಾಗೂ ಪುತ್ರ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ದಿಗ್ವಿಜಯ ಸಿದ್ನಾಳ ವಿರುದ್ಧ ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮಾಜಿ ಸಂಸದ ಎಸ್.ಬಿ. ಸಿದ್ನಾಳ ಅವರ ಪುತ್ರ ದಿ. ಶಿವಕಾಂತ ಸಿದ್ನಾಳ ಇತ್ತೀಚೆಗೆ ನಿಧನರಾಗಿದ್ದಾರೆ. ಇವರ ಒಡೆತನದ ವಿಜಯಕಾಂತ ಡೈರಿಯನ್ನು ಶಶಿಕಾಂತ ಸಿದ್ನಾಳ ಕುಟುಂಬ ಕಬಳಿಸಲು ಹುನ್ನಾರ ನಡೆಸಿದ್ದು, ಇದಕ್ಕಾಗಿ ತಮ್ಮ ವಿರುದ್ಧ ಮಾಟಮಂತ್ರ ನಡೆಸಲಾಗಿದೆ. ಜತೆಗೆ ತಮ್ಮ ಪತಿ ಶಿವಕಾಂತ ಅವರ ಸಮಾಧಿ ಮೇಲೂ ವಾಮಾಚಾರ ನಡೆಸಲಾಗಿದೆ. ವಿಜಯಕಾಂತ ಡೈರಿ ಪಾಲುದಾರಿಕೆ ಹಾಗೂ ಅದರ ಆಸ್ತಿ ಕಬಳಿಸುವ ಕುತಂತ್ರ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ.


Spread the love

About Laxminews 24x7

Check Also

ಡಿಕೆಶಿ-ಸಿದ್ದರಾಮಯ್ಯ ಬಣಗಳ ಮುಖಂಡರ ನಡುವೆ ಪರಸ್ಪರ ವಾಕ್ಸಮರ

Spread the loveತುಮಕೂರು: ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ಬಣ vs ಸಿದ್ದರಾಮಯ್ಯ ಬಣಗಳ ನಡುವಿನ ಜಟಾಪಟಿ ಜೋರಾಗಿದ್ದು, ಭಾರೀ ಚರ್ಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ