Breaking News

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮೊಬೈಲ್ ಕೇಂದ್ರ ಸರಕಾರದ್ದು ಎನ್ನುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಹೇಳಿಕೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದ ತೆರಿಗೆಯಲ್ಲಿ ಕೇಂದ್ರ ಪಾಲು ಪಡೆಯುವುದಿಲ್ಲವೇ? ಇದು ರಾಜಕೀಯ ಮಾಡುವ ವಿಷಯವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ ಮಾಡಿದರು. ಇಂತಹ ಯೋಜನೆಗಳು ಯಾವತ್ತೂ ಕೇಂದ್ರ ಮತ್ತು ರಾಜ್ಯ ಸರಕಾರದ 60:40ರ ಅನುಪಾತದಲ್ಲಿರುತ್ತವೆ. ಹಾಗೆಯೇ ರಾಜ್ಯ ಸರಕಾರದ ತೆರಿಗೆಯಲ್ಲೂ ಕೇಂದ್ರ ಸರಕಾರಕ್ಕೆ ಪಾಲು ಹೋಗುತ್ತದೆ. ರಾಜ್ಯ ಮತ್ತು ಕೇಂದ್ರದಲ್ಲಿ ಯಾವುದೇ ಪಕ್ಷದ ಸರಕಾರಗಳು ಅಧಿಕಾರದಲ್ಲಿರಲಿ, ಇಂತಹ ಯೋಜನೆಗಳಿಗೆ ಅವುಗಳು ತಮ್ಮದೇ ಆದ ಪಾಲನ್ನು ಭರಿಸುವುದು ಒಕ್ಕೂಟ ವ್ಯವಸ್ಥೆಯಲ್ಲಿ ನಡೆದು ಬಂದಿರುವ ಪದ್ಧತಿ ಎಂದರು. ರೈಲ್ವೆ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಕೇಂದ್ರ ಸರಕಾರದ ಯೋಜನೆಗಳೆಂದು ಹೇಳಲಾಗುತ್ತದೆ. ಹಾಗಂತ ಪೂರ್ಣ ಹಣವನ್ನು ಕೇಂದ್ರವೇ ಭರಿಸುವುದಿಲ್ಲ. ರಾಜ್ಯ ಸರಕಾರ ತನ್ನ ಪಾಲಿನ ಹಣವನ್ನೂ ನೀಡುತ್ತದೆ. ಹಾಗೆಯೇ ರಾಜ್ಯ ಸರಕಾರದ ಅನೇಕ ಯೋಜನೆಗಳಿಗೆ ಕೇಂದ್ರ ಸರಕಾರ ನೆರವು ನೀಡುತ್ತದೆ. ಹಾಗಂತ ಇದು ಕೇಂದ್ರ ಸರಕಾರದ ಯೋಜನೆ ಎನ್ನಲಾಗದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು ನೀಡಿದರು. ಕೇಂದ್ರ ಸರಕಾರ ಪೋಷಣ್ ಅಭಿಯಾನದ ಅಡಿಯಲ್ಲಿ ಅನುದಾನ ನೀಡಿದೆಯೇ ವಿನಃ ಇದೇನೂ ವಿಶೇಷ ಅನುದಾನವಲ್ಲ. ಇಷ್ಟು ವರ್ಷ ಶಾಸಕರಾಗಿರುವವರು ಯೋಜನೆಗಳ ಕುರಿತು ಮಾಹಿತಿ ಹೊಂದಿರಬೇಕಾಗುತ್ತದೆ ಎಂದು ಹೆಬ್ಬಾಳಕರ್ ಹೇಳಿದರು.

Spread the love

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮೊಬೈಲ್ ಕೇಂದ್ರ ಸರಕಾರದ್ದು ಎನ್ನುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಹೇಳಿಕೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದ ತೆರಿಗೆಯಲ್ಲಿ ಕೇಂದ್ರ ಪಾಲು ಪಡೆಯುವುದಿಲ್ಲವೇ?

ಇದು ರಾಜಕೀಯ ಮಾಡುವ ವಿಷಯವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ ಮಾಡಿದರು.

ಇಂತಹ ಯೋಜನೆಗಳು ಯಾವತ್ತೂ ಕೇಂದ್ರ ಮತ್ತು ರಾಜ್ಯ ಸರಕಾರದ 60:40ರ ಅನುಪಾತದಲ್ಲಿರುತ್ತವೆ. ಹಾಗೆಯೇ ರಾಜ್ಯ ಸರಕಾರದ ತೆರಿಗೆಯಲ್ಲೂ ಕೇಂದ್ರ ಸರಕಾರಕ್ಕೆ ಪಾಲು ಹೋಗುತ್ತದೆ. ರಾಜ್ಯ ಮತ್ತು ಕೇಂದ್ರದಲ್ಲಿ ಯಾವುದೇ ಪಕ್ಷದ ಸರಕಾರಗಳು ಅಧಿಕಾರದಲ್ಲಿರಲಿ, ಇಂತಹ ಯೋಜನೆಗಳಿಗೆ ಅವುಗಳು ತಮ್ಮದೇ ಆದ ಪಾಲನ್ನು ಭರಿಸುವುದು ಒಕ್ಕೂಟ ವ್ಯವಸ್ಥೆಯಲ್ಲಿ ನಡೆದು ಬಂದಿರುವ ಪದ್ಧತಿ ಎಂದರು.

ರೈಲ್ವೆ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಕೇಂದ್ರ ಸರಕಾರದ ಯೋಜನೆಗಳೆಂದು ಹೇಳಲಾಗುತ್ತದೆ. ಹಾಗಂತ ಪೂರ್ಣ ಹಣವನ್ನು ಕೇಂದ್ರವೇ ಭರಿಸುವುದಿಲ್ಲ. ರಾಜ್ಯ ಸರಕಾರ ತನ್ನ ಪಾಲಿನ ಹಣವನ್ನೂ ನೀಡುತ್ತದೆ. ಹಾಗೆಯೇ ರಾಜ್ಯ ಸರಕಾರದ ಅನೇಕ ಯೋಜನೆಗಳಿಗೆ ಕೇಂದ್ರ ಸರಕಾರ ನೆರವು ನೀಡುತ್ತದೆ. ಹಾಗಂತ ಇದು ಕೇಂದ್ರ ಸರಕಾರದ ಯೋಜನೆ ಎನ್ನಲಾಗದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು ನೀಡಿದರು.

ಕೇಂದ್ರ ಸರಕಾರ ಪೋಷಣ್ ಅಭಿಯಾನದ ಅಡಿಯಲ್ಲಿ ಅನುದಾನ ನೀಡಿದೆಯೇ ವಿನಃ ಇದೇನೂ ವಿಶೇಷ ಅನುದಾನವಲ್ಲ. ಇಷ್ಟು ವರ್ಷ ಶಾಸಕರಾಗಿರುವವರು ಯೋಜನೆಗಳ ಕುರಿತು ಮಾಹಿತಿ ಹೊಂದಿರಬೇಕಾಗುತ್ತದೆ ಎಂದು ಹೆಬ್ಬಾಳಕರ್ ಹೇಳಿದರು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ