ದಾವಣಗೆರೆ: ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ವಿಪ್ಲವ ಆಗಲಿದೆ ಎಂದು ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ರಾಜಕೀಯ ವಿಪ್ಲವಕ್ಕೆ ಜನವರಿಯವರೆಗೂ ಸಮಯವಿದೆ. ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಅದೇ ರೀತಿ ನಮ್ಮಲ್ಲಿಯೂ ವಿಪ್ಲವ ಆಗಲಿದೆ ಎಂದು ಪರೋಕ್ಷವಾಗಿ ಹೇಳುವ ಮೂಲಕ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂಬುದರ ಬಗ್ಗೆ ಹೇಳಿದರು.
ಕೆಲ ದಿನಗಳ ಹಿಂದೆ ಗ್ರಹಣ ಫಲ ರಾಜಕೀಯ ವರ್ಗದ ಬಗ್ಗೆ ವಿಪ್ಲವ ಅಂತ ಬಂದಿದೆ. ಇದೇ ವೇಳೆ ಸಿಎಂ ಬಿ.ಎಸ್.ಯಡಿಯೂರಪ್ಪನವರ ಕುರಿತು ಕೇಳಿದ ಪ್ರಶ್ನೆಗೆ, ಒಬ್ಬೊಬ್ಬರ ಬಗ್ಗೆ ಹೇಳಲ್ಲ ಎಂದು ಉತ್ತರಿಸಿದರು.