Breaking News
Home / ಜಿಲ್ಲೆ / ಬೆಂಗಳೂರು / ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳ ವಶಕ್ಕೆ

ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳ ವಶಕ್ಕೆ

Spread the love

ಬೆಂಗಳೂರು: ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಅನಧಿಕೃತವಾಗಿ ಸಂಚರಿಸುತಿದ್ದ ಬಸ್ಸುಗಳನ್ನು ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಎರಡು ಬಸ್ಸುಗಳು ಒಂದೇ ನಂಬರ್, ಒಂದೇ ಕಲ್ಲರ್, ಒಂದೇ ಬಸ್ ವಿನ್ಯಾಸ ಹೊಂದಿದ್ದು, ಸರ್ಕಾರಕ್ಕೆ ಲಕ್ಷ ಲಕ್ಷ ವಂಚನೆ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಬಸ್‍ಗಳನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

ನೆಲಮಂಗಲ ಹಾಗೂ ಯಶವಂತಪುರ ಆರ್.ಟಿ.ಓ ಅಧಿಕಾರಿಗಳ ಜಂಟಿ ಕಾರ್ಯಚರಣೆ ಮಾಡಿ ರಾಜ್ಯದಲ್ಲಿ ಅನಧಿಕೃತವಾಗಿ ಓಡಾಡುತ್ತಿದ್ದ ಏಳು ಬಸ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ ಈ ಬಸ್ ಮಾಲೀಕರು ಒಂದು ವರ್ಷಕ್ಕೆ ಸರ್ಕಾರಕ್ಕೆ 41 ಲಕ್ಷ ತೆರಿಗೆ ವಂಚಿಸುತ್ತಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ಸಾರಿಗೆ ಆಯುಕ್ತ ಶಿವಕುಮಾರ್ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ