Breaking News

ಪವಿತ್ರಾಗೌಡ ದರ್ಶನ್‌ ಪತ್ನಿ ಅಲ್ಲ, ನಾನು ಪತ್ನಿ : ವಿಜಯಲಕ್ಷ್ಮಿ ಪತ್ರ

Spread the love

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಪವಿತ್ರಾಗೌಡಳನ್ನು ದರ್ಶನ್‌ ಪತ್ನಿ ಎಂದು ಉಲ್ಲೇಖಿಸದಂತೆ ನಗರ ಪೊಲೀಸ್‌ ಆಯುಕ್ತರಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಪತ್ರ ಬರೆದಿದ್ದಾರೆ.

ಈ ಕುರಿತು ಪತ್ರದಲ್ಲಿ ಉಲ್ಲೇಖಿಸಿರುವ ವಿಜಯಲಕ್ಷ್ಮೀ, ನಾನು ನಟ ದರ್ಶನ್‌ ಅವರನ್ನು ೨೦೦೩ ರಲ್ಲಿ ಮದುವೆಯಾಗಿದ್ದು, ನಮಗೆ ಓರ್ವ ಮಗನಿದ್ದಾನೆ.

ಆದರೆ ಸಂಜಯ್‌ ಸಿಂಗ್‌ ಎಂಬುವರ ಜೊತೆಗೆ ಪವಿತ್ರಾಗೌಡಳಿಗೆ ಮದುವೆಯಾಗಿದ್ದು, ಅವರಿಗೂ ಒಬ್ಬ ಮಗಳಿದ್ದಾಳೆ. ಆದರೆ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ದರ್ಶನ್‌ ಅವರ ಪತ್ನಿ ಪವಿತ್ರಾಗೌಡ ಅಂತ ಹೇಳಿದ್ದೀರಿ. ಹೀಗಾಗಿ ಪೊಲೀಸ್‌ ದಾಖಲೆಗಳಲ್ಲಿ ಪವಿತ್ರಾಗೌಡಳನ್ನು ದರ್ಶನ್‌ ಪತ್ನಿ ಎಂದು ಉಲ್ಲೇಖಿಸದಂತೆ ವಿಜಯಲಕ್ಷ್ಮೀ ಪತ್ರದ ಮೂಲಕ ಕೋರಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ