Breaking News

ಪಡಿತರ ಚೀಟಿದಾರ’ರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ: ಮತ್ತೆ ‘ಆಧಾರ್ ಸಂಖ್ಯೆ’ ಜೋಡಣೆಗೆ ದಿನಾಂಕ ವಿಸ್ತರಣೆ |

Spread the love

ಬೆಂಗಳೂರು: ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಆದ್ರೇ ಇನ್ನೂ ಕೆಲವರು ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಲ್ಲ. ಈ ಹಿನ್ನಲೆಯಲ್ಲಿ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರವು ಮತ್ತೆ ಡೆಡ್ ಲೈನ್ ವಿಸ್ತರಣೆ ಮಾಡಿರುವುದಾಗಿ ತಿಳಿದು ಬಂದಿದೆ.

 

ಈ ಬಗ್ಗೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಸೆಪ್ಟೆಂಬರ್.30, 2024ರವರೆಗೆ ಪಡಿತರ ಚೀಟಿದಾರರು ತಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡೋದಕ್ಕೆ ಗಡುವನ್ನು ವಿಸ್ತರಣೆ ಮಾಡಲಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.

ಅಂದಹಾಗೇ ಜೂನ್.30, 2024ರವರೆಗೆ ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡೋದಕ್ಕೆ ಅವಕಾಶ ನೀಡಲಾಗಿತ್ತು. ಆದ್ರೇ ಅನೇಕ ಪಡಿತರ ಚೀಟಿದಾರರ ಕುಟುಂಬಸ್ಥರು ಆಧಾರ್ ಸಂಖ್ಯೆ ಲಿಂಕ್ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ಈಗ ರಾಜ್ಯ ಸರ್ಕಾರ ಮತ್ತೊಮ್ಮೆ ಸೆಪ್ಟೆಂಬರ್.30ರವರೆಗೆ ದಿನಾಂಕವನ್ನು ವಿಸ್ತರಣೆ ಮಾಡಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ