Breaking News

ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರಬರಲಿ: ಅರವಿಂದ ಬೆಲ್ಲದ

Spread the love

ಹುಬ್ಬಳ್ಳಿ: ‘ರಾಜ್ಯ ಸರ್ಕಾರ ಡೆಂಗಿ ನಿಯಂತ್ರಣಕ್ಕೆ ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕು. ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರ ಬಂದು ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಈ ಬಗ್ಗೆ ಪರಿಶೀಲಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.

ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರಬರಲಿ: ಅರವಿಂದ ಬೆಲ್ಲದ

ನಗರದ ಕಿಮ್ಸ್ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಡೆಂಗಿಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕು. ಔಷಧ, ಪರೀಕ್ಷೆಗೆ ಪ್ರತ್ಯೇಕವಾಗಿ ಹೆಚ್ಚುವರಿ ಅನುದಾನ ನೀಡಬೇಕು’ ಎಂದು ಒತ್ತಾಯಿಸಿದರು.

ಶಾಸಕ ಮಹೇಶ ಟೆಂಗಿನಕಾಯಿ, ಕಿಮ್ಸ್ ನಿರ್ದೇಶಕ ಡಾ.ಎಸ್.ಎಫ್‌.ಕಮ್ಮಾರ ಇದ್ದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ