Breaking News

ಕಲ್ಯಾಣ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಲಿ: ಶ್ರೀಧರ ಬಳಿಗಾರ

Spread the love

ಕಲ್ಯಾಣ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಲಿ: ಶ್ರೀಧರ ಬಳಿಗಾರ

ಳಿಯಾಳ: ‘ಕಲ್ಯಾಣ ರಾಜ್ಯ ಎಂಬುದು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು. ಕಾವ್ಯ ರಚನೆಯ ಮೂಲಕ ಕಲ್ಯಾಣ ರಾಜ್ಯ ನಿರ್ಮಾಣವಾಗಬೇಕು. ರಾಜ ಮಾರ್ಗವು ಸಾಂಸ್ಕೃತಿಕ ಅಂತಃಕರಣದಿಂದ ಕೂಡಿರಬೇಕು’ ಎಂದು ಸಾಹಿತ್ಯ ಅಕಾಡೆಮಿಯ ಸಾಮಾನ್ಯ ಸಲಹಾ ಮಂಡಳಿಯ ಸದಸ್ಯರಾದ ಶ್ರೀಧರ ಬಳಿಗಾರ ಹೇಳಿದರು.

ಕಲ್ಯಾಣ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಲಿ: ಶ್ರೀಧರ ಬಳಿಗಾರ

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಅಕಾಡೆಮಿ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಮಂಗಳವಾರ ನಡೆದ ಕಾವ್ಯ ಮತ್ತು ಕಲ್ಯಾಣ ರಾಜ್ಯ ಸಾಹಿತ್ಯ ವೇದಿಕೆ ಕಾರ್ಯಕ್ರಮದಲ್ಲಿ ‘ಕಾವ್ಯದಲ್ಲಿ ರಾಜಕೀಯ ಪ್ರಜ್ಞೆ’ ಕುರಿತು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ನಾಗರೇಖಾ ಗಾಂವಕರ, ‘ಕನ್ನಡ ಕಾವ್ಯದ ಇತ್ತೀಚಿನ ಪ್ರವೃತ್ತಿಗಳು’ ಕುರಿತು ಮಾತನಾಡಿ, ಕಾವ್ಯ ಶ್ರೇಷ್ಠತೆಯ ವ್ಯಸನವನ್ನು ಕಡಿಮೆ ಮಾಡಬೇಕು. ಕಾವ್ಯ ನಿರ್ದಿಷ್ಟ ಮಾರ್ಗದಲ್ಲಿ ರಚನೆಯಾಗಬೇಕು ಎಂದರು.

ಪ್ರಾಚಾರ್ಯ ಚಂದ್ರಶೇಖರ್ ಲಮಾಣಿ ಅಧ್ಯಕ್ಷತೆ ವಹಿಸಿ, ಚನ್ನಪ್ಪ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಸುಮಂಗಲಾ ಅಂಗಡಿ, ಕನ್ನಡ ಬರಹಗಾರರಾದ ಮಾರ್ತಾಂಡಪ್ಪ ಕತ್ತಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ

Spread the love ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ‌ ಘಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ