Breaking News

ಅವ್ಯವಸ್ಥೆಯ ಆಗರವಾದ ಕೋಟೆವಾಡಾ ರುದ್ರಭೂಮಿ

Spread the love

ಅಂಕೋಲಾ: ಪಟ್ಟಣದ ಕೋಟೆವಾಡದಲ್ಲಿರುವ ಹಿಂದೂ ರುದ್ರ ಭೂಮಿ ನಿರ್ವಹಣೆಯ ಕೊರತೆಯಿಂದ ಅವ್ಯವಸ್ಥೆಯ ಆಗರವಾಗಿದ್ದು ಮಳೆಗಾಲದಲ್ಲಿ ಚಿತೆ ದಹಿಸುವುದೇ ದೊಡ್ಡ ಚಿಂತೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಪಟ್ಟಣದ ಸುತ್ತ ಮುತ್ತಲಿನ ವ್ಯಾಪ್ತಿಯ ಬಹುತೇಕ ಸಮಾಜದ ಜನರು ಶವ ಸಂಸ್ಕಾರಕ್ಕೆ ಬಳಕೆ ಮಾಡುವ ಈ ರುದ್ರಭೂಮಿಯಲ್ಲಿ ಶವ ಸಂಸ್ಕಾರ ನಡೆಸುವ ಸ್ಥಳದಲ್ಲಿ ಶೆಡ್‍ನ ಚಾವಣಿ ಮಳೆ-ಗಾಳಿಗೆ ಹಾರಿ ಹೋಗಿದ್ದು, ಮಳೆಯ ನೀರು ಶವ ದಹಿಸುವ ತೊಟ್ಟಿಯಲ್ಲೇ ನೇರವಾಗಿ ಸುರಿಯುತ್ತಿದೆ.

ಇದರಿಂದ ಅಂತಿಮ ಸಂಸ್ಕಾರ ಕಾರ್ಯಕ್ಕೆ ತೀವ್ರ ಸಮಸ್ಯೆ ಉಂಟಾಗುತ್ತಿದೆ ಎಂಬುದು ಜನರ ದೂರು.

‘ಮಳೆ ನೀರು ಸುರಿದು ಶವ ಸಂಸ್ಕಾರ ಬೂದಿಯೊಂದಿಗೆ ಬೆರೆತು ಸ್ಮಶಾನ ಭೂಮಿಯ ಪರಿಸರ ಗಬ್ಬೆದ್ದು ನಾರುವಂತಾಗಿದೆ. ಬೀಡಾಡಿ ದನಗಳು, ಹಂದಿಗಳು ಶವ ಸಂಸ್ಕಾರದ ಸ್ಥಳದಲ್ಲಿ ಆಶ್ರಯ ಪಡೆದಿವೆ. ವರ್ಷಕ್ಕಿಂತ ಹಿಂದಿನಿಂದಲೂ ಈ ದುಸ್ಥಿತಿ ಎದುರಾಗಿದ್ದರೂ ಸಮಸ್ಯೆ ಪರಿಹರಿಸುವತ್ತ ಯಾರೂ ಗಮನ ಹರಿಸಿದಂತಿಲ್ಲ’ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತ ನಾಗರಾಜ ಅಂಕೋಲಾ.ಅಂಕೋಲಾ: ಅವ್ಯವಸ್ಥೆಯ ಆಗರವಾದ ಕೋಟೆವಾಡಾ ರುದ್ರಭೂಮಿ

‘ಒಂದು ದಹನ ತೊಟ್ಟಿ ಸುಸ್ಥಿಯಲ್ಲಿದ್ದರೆ ಮಳೆ ನೀರು ಸುರಿಯುವ ಭಾಗದಲ್ಲಿ ಇರುವ ತೊಟ್ಟಿ ತುಕ್ಕು ಹಿಡಿದು ಕಳಚಿ ಬೀಳುವ ಸ್ಥಿತಿಗೆ ತಲುಪಿದೆ. ಒಂದು ಬದಿಯ ತೊಟ್ಟಿಯಲ್ಲಿ ಸಂಸ್ಕಾರ ಕಾರ್ಯ ನಡೆಯುತ್ತಿದ್ದರೆ, ಇನ್ನೊಂದು ಮೃತ ದೇಹ ತಂದರೆ ಮುರುಕು ತೊಟ್ಟಿಯಲ್ಲಿ ಸಂಸ್ಕಾರ ಕಾರ್ಯ ಅನಿವಾರ್ಯವಾಗಿದೆ’ ಎಂದರು.

‘ರುದ್ರಭೂಮಿಯ ಚಾವಣಿಗೆ ಹಾನಿಯಾಗಿರುವ ಬಗ್ಗೆ ಸಾರ್ವಜನಿಕರ ದೂರು ಬಂದಿದೆ. ಆದಷ್ಟು ಶೀಘ್ರದಲ್ಲಿ ರುದ್ರಭೂಮಿಗೆ ಅಗತ್ಯ ಸೌಕರ್ಯ ಒದಗಿಸಿಕೊಡಲಾಗುವುದು’ ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ