Breaking News

ಹುಬ್ಬಳ್ಳಿ: ಆಗದ ವಲಯ ವರ್ಗಾವಣೆ; ಶಿಕ್ಷಕರಿಗೆ ನಿರಾಸೆ

Spread the love

ಹುಬ್ಬಳ್ಳಿ: ವಲಯ ವರ್ಗಾವಣೆ ನಡೆಸದಿರಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿರುವುದು ಬಹುತೇಕ ಶಿಕ್ಷಕರಲ್ಲಿ ನಿರಾಸೆ ಮೂಡಿಸಿದೆ. ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ವರ್ಗಾವಣೆ ಆಗುವ ಅವರ ನಿರೀಕ್ಷೆ ಹುಸಿಯಾಗಿದೆ.

ಕರ್ನಾಟಕ ಶಿಕ್ಷಕರ ವರ್ಗಾವಣೆ ಮತ್ತು ನಿಯಂತ್ರಣ ಕಾಯ್ದೆ (ತಿದ್ದುಪಡಿ)-2022ರ ಪ್ರಕಾರ, ಹೆಚ್ಚುವರಿ ವರ್ಗಾವಣೆ ನಂತರದ ವರ್ಷದಲ್ಲಿ ವಲಯ (ಕಡ್ಡಾಯ) ವರ್ಗಾವಣೆ ಮಾಡಬೇಕು.

ಈ ಪ್ರಕ್ರಿಯೆಯಲ್ಲಿ 10 ವರ್ಷಕ್ಕೂ ಹೆಚ್ಚು ಸಮಯದಿಂದ ನಗರ ಪ್ರದೇಶದಲ್ಲಿ (ಎ-ವಲಯ) ಕೆಲಸ ಮಾಡುತ್ತಿರುವ ಶಿಕ್ಷಕರನ್ನು ಗ್ರಾಮೀಣ (ಸಿ-ವಲಯ) ಪ್ರದೇಶಕ್ಕೆ, ಗ್ರಾಮೀಣ ಪ್ರದೇಶದಲ್ಲಿನ ಶಿಕ್ಷಕರನ್ನು ನಗರ ಪ್ರದೇಶಕ್ಕೆ ಕಡ್ಡಾಯವಾಗಿ ವರ್ಗಾವಣೆ ಮಾಡಬೇಕು.

‘ರಾಜ್ಯದಲ್ಲಿ 5 ಲಕ್ಷ ಶಿಕ್ಷಕರಿದ್ದು, ಸುಮಾರು 4 ಲಕ್ಷ ಶಿಕ್ಷಕರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಾರೆ. ಅವರಲ್ಲಿ 10 ವರ್ಷ ಪೂರೈಸಿದ ಹಲವರು ನಗರ ಪ್ರದೇಶಕ್ಕೆ ವರ್ಗಾವಣೆ ಆಗುವ ನಿರೀಕ್ಷೆಯಲ್ಲಿದ್ದರು. ಕಳೆದ ವರ್ಷ ಹೆಚ್ಚುವರಿ ವರ್ಗಾವಣೆ ಆಗಿದ್ದಕ್ಕೆ, ಈ ವರ್ಷ ವಲಯ ವರ್ಗಾವಣೆ ಮಾಡಬೇಕಿತ್ತು’ ಎಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹಾಲೇಶ ನವುಲೆ ‘ತಿಳಿಸಿದರು.


Spread the love

About Laxminews 24x7

Check Also

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ