Breaking News

ಬೆಳಗಾವಿ | ಬಿಟ್ ಕಾಯಿನ್ ಪ್ರಕರಣ: ದೂರುದಾರ ಕೈದಿಯ ಹೇಳಿಕೆ ದಾಖಲು

Spread the love

ಬೆಳಗಾವಿ: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನ ಹೇಳಿಕೆ ಪಡೆಯಲು, ಎಸ್.ಐ.ಟಿ‌ ತಂಡವು ಇಲ್ಲಿ‌ನ ಕೇಂದ್ರ ಕಾರಾಗೃಹಕ್ಕೆ ಭೇಟಿ‌ ನೀಡಿತು ಎಂದು ಮೂಲಗಳು ಖಚಿತಪಡಿಸಿವೆ.

‘ಈ ಹಗರಣದಲ್ಲಿ ಬಂದಿಖಾನೆ ಇಲಾಖೆ ಡಿಐಜಿ ಟಿ.ಪಿ. ಶೇಷ ಭಾಗಿಯಾದ ಬಗ್ಗೆ ನಾಗೇಂದ್ರ ಅಲಿಯಾಸ್ ನಾಗ ಎಂಬ ಕೈದಿ ಎಡಿಜಿಪಿ ಅವರಿಗೆ ಜೂನ್ 26ರಂದು ದೂರು ನೀಡಿದ್ದ.‌ ಈ ಕೈದಿ ಈಗ ಇಲ್ಲಿನ‌ ಹಿಂಡಲಗಾ ಜೈಲಿನಲ್ಲಿದ್ದ ಕಾರಣ ತನಿಖಾಧಿಕಾರಿಗಳು ವಿಚಾರಣೆ ನಡೆಸಿದರು.

ಬೆಳಗಾವಿ | ಬಿಟ್ ಕಾಯಿನ್ ಪ್ರಕರಣ: ದೂರುದಾರ ಕೈದಿಯ ಹೇಳಿಕೆ ದಾಖಲು

ದೂರಿನ ಅರ್ಜಿ ಇಟ್ಟುಕೊಂಡು ಮೂರು ಗಂಟೆ ಕೈದಿಯ ವಿಚಾರಣೆ ನಡೆಸಿದ ತಂಡವು ಹೇಳಿಕೆ ದಾಖಲಿಸಿಕೊಂಡಿತು.

‘ಶೇಷ ಅವರು ಹ್ಯಾಕರ್ ಶ್ರೀಕೆಗೆ ಲ್ಯಾಪ್‌ಟಾಪ್ ನೀಡಿ ₹20 ಕೋಟಿ ಮೌಲ್ಯದ ಬಿಟ್‌ಕಾಯಿನ್ ವರ್ಗಾವಣೆ ಮಾಡಿಸಿದ್ದಾರೆ” ಎಂಬುದು ನಾಗೇಂದ್ರ ದೂರು‌.


Spread the love

About Laxminews 24x7

Check Also

25 ಸಾವಿರ ಲಂಚ ಪಡೆದು ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ  ಸಿಕ್ಕಿಬಿದ್ದ ಪಿಡಿಓ

Spread the loveಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ