ಕಲಬುರಗಿ: ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೊಲೀಸರು ಯುವಕನ ತಂದೆ, ತಾಯಿಯನ್ನು ಥಳಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಕಲಬುರಗಿ ಮಹಿಳಾ ಠಾಣೆಯ ಪೊಲೀಸರು ಯುವಕನ ಪೋಷಕರಿಗೆ ಥಳಿಸಿದ್ದು, ಯುವಕ ಅಯ್ಯಪ್ಪ ಸ್ವಾಮಿ ತಂದೆ ತುಕಾರಾಮ್ ಮತ್ತು ತಾಯಿ ಸುಜಾತ ಅವರನ್ನು ಪೊಲೀಸ್ ಠಾಣೆಯಲ್ಲೇ ಮನ ಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಿಂದ ಪೋಷಕರನ್ನು ಕರೆಸಿ ಪೊಲೀಸರು ಹಲ್ಲೆ ಮಾಡಿದ್ದಾರೆ.

ಕಲಬುರಗಿಯ ಯುವತಿ ವಿಜಯಪುರ ಯುವಕನ ಮಧ್ಯೆ ಬೆಳಗಾವಿಯಲ್ಲಿ ಪ್ರೀತಿ ಮೂಡಿದ್ದು, ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸಿ ಮನೆಯಿಂದ ಓಡಿ ಹೋಗಿದ್ದಾರೆ. ಪ್ರೇಮಿಗಳು ಮನೆ ಬಿಟ್ಟು ಹೋಗಿದ್ದಕ್ಕೆ ಪೋಷಕರಿಗೆ ಶಿಕ್ಷೆ ನೀಡಲಾಗಿದೆ. ಯುವಕನ ತಂದೆ, ತಾಯಿಗೆ ಬಾಸುಂಡೆ ಬರುವ ರೀತಿ ಪೊಲೀಸರು ಥಳಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
Laxmi News 24×7