ಕುಮಟಾ: ಹೆದ್ದಾರಿ ಬದಿಯ ಹೊಳೆಗೆ ಖಾಲಿ ಗ್ಯಾಸ್ ಟ್ಯಾಂಕರ್ ಹೊತ್ತ ಲಾರಿ ಉರುಳಿ ಬಿದ್ದು ವಾಹನ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ಪಟ್ಟಣದ ಹೊನಮಾಂವ್ ಬಳಿ ನಡೆದಿದೆ.
ಖಾಲಿ ಟ್ಯಾಂಕರ್ ಹೊತ್ತ ಲಾರಿ ಗೋವಾದಿಂದ ಮಂಗಳೂರಿಗೆ ಹೋಗುತ್ತಿತ್ತು. ವಾಹನದ ಎದುರು ಬೈಕ್ ಬಂದಾಗ ಅಪಾಯ ಸಂಭವಿಸುವುದನ್ನು ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿದ ಲಾರಿ ಪಕ್ಕದ ಹೊಳೆಗೆ ಉರುಳಿದೆ.
ಲಾರಿ ಚಾಲಕ ಜಾರ್ಖಂಡ್ ಮೂಲದ ಬಿರೇಂದರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಪಿ.ಎಸ್.ಐ ಮಂಜುನಾಥ ಗೌಡರ್ ತಿಳಿಸಿದ್ದಾರೆ.