ಬಾಗಲಕೋಟೆ, ಜುಲೈ 12: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪ್ತ ಅಂತ ಹೇಳಿಕೊಂಡು ಬಾಗಲಕೋಟೆ (Bagalkot) ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀಗೆ ಏಳು ಲಕ್ಷ ರೂ. ವಂಚಿಸಿದ್ದಾನೆ. ರಾಮಯ್ಯ ವಂಚಿಸಿದ ಆರೋಪಿ. 2023ರ ಸೆಪ್ಟೆಂಬರ್ ತಿಂಗಳಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗೆ ಕಿತ್ತಾಟ ನಡೆದಿತ್ತು. ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗಾಗಿ ಜಯಶ್ರೀ ಎಮ್ಮಿ ಹಾಗೂ ಶಾಸಕ ಹೆಚ್ವೈ ಮೇಟಿ ಅಳಿಯ ರಾಜ್ಕುಮಾರ್ ಮಧ್ಯೆ ಜಟಾಪಟಿ ನಡೆದಿತ್ತು. ಒಂದು ದಿನ ಬೆಳಗ್ಗೆ ರಾಜ್ಕುಮಾರ್ ಯರಗಲ್ ಡಿಹೆಚ್ಓ ಕುರ್ಚಿಯಲ್ಲಿ ಕೂತಿದ್ದರು.
