Breaking News

ಧಾರಾಕಾರ ಮಳೆ-148 ಅಡಿ ಎತ್ತರದ ಮಂದಿರ ಮುಳುಗಡೆ

Spread the love

ಬೆಳಗಾವಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ನದಿ ಮೂಲಕ ಹಿಡಕಲ್‌ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಿಡಕಲ್‌ ಜಲಾಶಯದಲ್ಲಿರುವ 148 ಅಡಿ ಎತ್ತರದ ಶ್ರೀ ವಿಠಲ ಮಂದಿರ ಸಂಪೂರ್ಣ ಮುಳುಗಡೆಯಾಗಿದೆ.

ಬೆಳಗಾವಿ: ಧಾರಾಕಾರ ಮಳೆ-148 ಅಡಿ ಎತ್ತರದ ಮಂದಿರ ಮುಳುಗಡೆ

ಸಾವಂತವಾಡಿ, ಅಂಬೋಲಿ ಅರಣ್ಯ ಪ್ರದೇಶದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ನದಿ ಮೂಲಕ ಹಿಡಕಲ್‌ ಜಲಾಶಯಕ್ಕೆ 25 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿರುವ ಶ್ರೀ ವಿಠಲ ಮಂದಿರ ಸಂಪೂರ್ಣ ಜಲಾವೃತಗೊಂಡಿದ್ದು, ಕಳೆದ 15 ದಿನಗಳಿಂದ ದರ್ಶನಕ್ಕೆ ಲಭ್ಯವಿದ್ದ ಮಂದಿರ ಈಗ ನೀರಿನಲ್ಲಿ ಮುಳುಗಿ ಕೇವಲ ಕಳಶ ಮಾತ್ರ ಕಾಣುತ್ತಿದೆ.

2175 ಅಡಿ ಸಾಮರ್ಥ್ಯದ ಹಿಡಕಲ್‌ ಜಲಾಶಯ 2128 ಅಡಿ ನೀರು ತುಂಬಿದ್ದು, 24 ಗಂಟೆಗಳ ಅವಧಿಯಲ್ಲಿ ಜಲಾಶಯ ಮಟ್ಟದಲ್ಲಿ ಐದು ಅಡಿ ನೀರು ಹೆಚ್ಚಳವಾಗಿದೆ. ಖಾನಾಪುರ ತಾಲೂಕಿನಲ್ಲಿ ಕಣಕುಂಬಿ ಹಾಗೂ ಜಾಂಬೋಟಿ ಅರಣ್ಯ ಪ್ರದೇಶದಲ್ಲೂ ಧಾರಾಕಾರ ಮಳೆ ಆಗುತ್ತಿರುವುದರಿಂದ ಮಲಪ್ರಭಾ ನದಿ ಮೂಲಕ 8504 ಕ್ಯೂಸೆಕ್‌ ನೀರು ಒಳಹರಿವು ಬರುತ್ತಿದೆ.


Spread the love

About Laxminews 24x7

Check Also

ಡಿಕೆಶಿ-ಸಿದ್ದರಾಮಯ್ಯ ಬಣಗಳ ಮುಖಂಡರ ನಡುವೆ ಪರಸ್ಪರ ವಾಕ್ಸಮರ

Spread the loveತುಮಕೂರು: ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ಬಣ vs ಸಿದ್ದರಾಮಯ್ಯ ಬಣಗಳ ನಡುವಿನ ಜಟಾಪಟಿ ಜೋರಾಗಿದ್ದು, ಭಾರೀ ಚರ್ಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ