Breaking News

ನೋವು ನಿವಾರಣೆ ಹೆಸರಲ್ಲಿ ಭಕ್ತರಿಗೆ ಕೊಡಲಿ ಏಟು ಕೊಡುವ ಪೂಜಾರಿ!

Spread the love

ಬಾಗಲಕೋಟೆ : ಮುಗ್ದಜನರ ಅಸಹಾಯಕತೆಯನ್ನ ಲಾಭ ಮಾಡಿಕೊಂಡು ಪೂಜೆ-ಪುನಸ್ಕಾರ ಅಂತೆಲ್ಲಾ ಹೇಳಿ ದುಡ್ಡು ಪೀಕುವ ಬಾಬಾಗಳು, ಪವಾಡ ಪುರುಷರು, ದೇವ ಮಾನವರ ಬಗ್ಗೆ ನಾವು ಕೇಳಿರುತ್ತೇವೆ. ಪೂಜೆಗಳನ್ನ (Worship) ಮಾಡಿಸಿದರೆ ಒಳ್ಳೆಯದಾಗುತ್ತೇ, ನಿಮ್ಮ ಕಷ್ಟಗಳು ಪರಿಹಾರ ಸಿಗಲಿವೆ ಎಂದೆಲ್ಲಾ ಹೇಳಿ ಮೋಸ ಮಾಡುವ ಜನರನ್ನ ಕೇಳಿರುತ್ತೇವೆ.

ಥೂ ಇದೆಂಥಾ ಕೃತ್ಯ! ನೋವು ನಿವಾರಣೆ ಹೆಸರಲ್ಲಿ ಭಕ್ತರಿಗೆ ಕೊಡಲಿ ಏಟು ಕೊಡುವ ಪೂಜಾರಿ!

ಆದರೆ ಇಲ್ಲೊಂದು ಮೂಡನಂಬಿಕೆಯಿಂದ (Superstition) ನಡೆದಿರುವ ಘಟನೆ ಕೇಳಿದರೆ ಬೆಚ್ಚಿ ಬೀಳುತ್ತೀರಾ. ಪೂಜಾರಿಯೊಬ್ಬ (Priest) ದೇಹದ ಭಾಗಗಗಳು ನೋವು ಎಂದು ಬಂದವರಿಗೆ ಕೊಡಲಿಯಿಂದ ಏಟು ಕೊಡುವ ಭಯಾನಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆ ವಿಡಿಯೋ ನೋಡಿದವರಿಗೆ ಮೈ ನಡುಗೋದಂತು ಗ್ಯಾರಂಟಿ.

ಭಂಡಾರ ಹಚ್ಚಿ ಕೊಡಲಿ ಏಟು

ಜಿಲ್ಲೆಯ ಮುಧೋಳ‌ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಕಾಶಿಲಿಂಗೇಶ್ವರ ದೇವಸ್ಥಾನದ ಪೂಜಾರಿ ಮೈ ಕೈ ನೋವು ಎಂದು ಬರುವವರಿಗೆ ಕೊಡಲಿಯಿಂದ ಹೊಡೆಯುತ್ತಾನೆ. ನೋವಿನ ಭಾಗಕ್ಕೆ ಬಂಡಾರ ಹಚ್ಚಿ ಕೊಡಲಿಯಿಂದ ಹೊಡೆದರೆ ಬೇಗ ಗುಣಮುಖವಾಗುತ್ತದೆ ಎಂದು ಮೂಢನಂಬಿಕೆಯಿಂದ ಈ ರೀತಿ ಮಾಡಲಾಗುತ್ತಿದೆ. ವಿಚಿತ್ರವೆಂದರೆ ಇದನ್ನ ನಂಬಿ ಹಲವಾರು ಮಂದಿ ಕೊಡಲಿ ಪೆಟ್ಟು ತಿನ್ನಲು ಬರುತ್ತಿದ್ದಾರೆ.


Spread the love

About Laxminews 24x7

Check Also

ಆರ್​ಎಸ್​ಎಸ್​ ಚಟುವಟಿಕೆ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಪರಿಶೀಲನೆ

Spread the loveಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆ ಚಟುವಟಿಕೆಗಳನ್ನು ನಿಷೇಧಿಸುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶೀಲಿಸಿ ಕ್ರಮವಹಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ