ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರವೂ ವರುರ್ಣಾಭಟ ಮುಂದುವರಿದಿದೆ. ಶಿವಮೊಗ್ಗದ ಆಗುಂಬೆ, ಕೊಡಗಿನ ಗೋಣಿಕೊಪ್ಪ ಸೇರಿ ಕರಾವಳಿಯಲ್ಲಿ ಮಳೆ ತೀವ್ರತೆ ಇನ್ನಷ್ಟು ಜಾಸ್ತಿಯಾಗಿದ್ದು, ಜಲಾಶಯಗಳಿಗೆ ಗಣನೀಯ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅರ್ಲಟ್ ಘೋಷಿಸಿದೆ. ಈ ಸಂದರ್ಭದಲ್ಲಿ 204 ಮಿಮೀ ಮಳೆ ಸುರಿಯಲಿದೆ. ಜು.17ರಿಂದ ಮುಂದಿನ ಮೂರು ದಿನ ಆರೆಂಜ್ ಅರ್ಲಟ್ ಸಹ ನೀಡಲಾಗಿದೆ. ಪ್ರತಿ ಗಂಟೆಗೆ 55 ಕಿ.ಮೀ.ವೇಗದಲ್ಲಿ ಬೀಸುವ ಬಿರುಗಾಳಿ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧಿಸಲಿದೆ.