Breaking News

ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

Spread the love

ಲಬುರಗಿ : ಕೃಷಿ ಜಮೀನೊಂದರಲ್ಲಿ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಇದೀಗ ಹಳೆ ದ್ವೇಷದ ಹಿನ್ನೆಲೆ ಹತ್ಯೆ ಮಾಡಿರರಬಹುದೆಂದು ಶಂಕೆ ವ್ಯಕ್ತವಾಗುತ್ತಿದೆ.

ಹೌದು ಕಲಬುರಗಿ ಜಿಲ್ಲೆಯ ಕಮಲಾಪುರ್ ತಾಲೂಕಿನ ನಾಗೂರ ಗ್ರಾಮದ ಖಾಸಗಿ ಕೃಷಿ ಜಮೀನಿನ ದಂಡೆಯಲ್ಲಿ ಅರ್ಧ ಸುಟ್ಟಿರುವ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಒಂದು ದಿನ ಹಿಂದೆ ಈ ಕೊಲೆ ನಡೆದಿರಬಹುದೆಂಬ ಅನುಮಾನ ಹುಟ್ಟಿಕೊಂಡಿದೆ.ಕಲಬುರ್ಗಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ : ಹತ್ಯೆಗೈದು ಬೆಂಕಿ ಹಚ್ಚಿರುವ ಶಂಕೆ

ಕೊಲೆಯಾದ ಮಹಿಳೆಯ ವಿಳಾಸ ಮತ್ತು ಗುರುತು ಪತ್ತೆಯಾಗಿಲ್ಲ. ಆರೋಪಿಗಳು ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಈ ದುಷ್ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಘಟನಾ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಪಿಎಸ್‌ಐ ಆಶಾ ರಾಠೋಡ, ಕಮಲಾಪುರ ಸಿಪಿಐ ವಿ.ನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ