Breaking News

ನೀಟ್ ಹಗರಣದ ಮತ್ತೊಂದು ಪ್ರಕರಣ ಬೆಳಕಿಗೆ

Spread the love

ಬೆಳಗಾವಿ: ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ನೀಟ್ ಹಗರಣ ಈಗ ಬೆಳಗಾವಿಗೂ ಅಂಟಿಕೊಂಡಿದೆ.

ಬೆಳಗಾವಿ ಮಾರ್ಕೆಟ್ ಪೊಲೀಸರು ಯಶಸ್ವೀ ಕಾರ್ಯಾಚರಣೆ ನಡೆಸಿ ತೆಲಂಗಾಣ ಮೂಲದ ಆರೋಪಿ ಅರಗೊಂಡ ಅರವಿಂದ ಉರ್ಫ್ ಅರುಣಕುಮಾರ (43)ನನ್ನು ಮುಂಬೈನಲ್ಲಿ ಬಂಧಿಸಿ ನೀಟ್ ಹಗರಣದ ಮತ್ತೊಂದು ಪ್ರಕರಣವನ್ನು ಬೆಳಕಿಗೆ ತಂದಿದ್ದಾರೆ.

Belagavi: ನೀಟ್ ಹಗರಣದ ಮತ್ತೊಂದು ಪ್ರಕರಣ ಬೆಳಕಿಗೆ: ಆರೋಪಿ ಬಂಧನ

ಆರೋಪಿಯಿಂದ ಒಟ್ಟು 1,30, 41,884 ರೂ. ಮೌಲ್ಯದ ನಗದು ಕಂಪ್ಯೂಟರ್, ಲ್ಯಾಪ್‌ಟಾಪ್, ನಗದು ಹಣ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ

ಬೆಳಗಾವಿ ಮಾರ್ಕೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆಗೆ ಮನೆ ಮಾಡಿದ್ದ ಅರುಣ ಕುಮಾರ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದವರಿಗೆ ಕರೆ ಮಾಡಿ ನೀಟ್ ನಲ್ಲಿ ಪರೀಕ್ಷೆ ಪಾಸ್ ಮಾಡಿಸಿ ನಿಮಗೆ ಮೆಡಿಕಲ್‌ ಸೀಟ್ ಕೊಡಿಸುವದಾಗಿ ಹೇಳುತ್ತಿದ್ದ.

ಈ ರೀತಿ ಬೆಳಗಾವಿಯ 10ಕ್ಕೂ ಅಧಿಕ ಜನರಿಂದ 1.08 ಕೋಟಿ ‌ಹಣ ಪಡೆದು ಮೋಸ ಮಾಡಿದ್ದಾನೆ ಎಂದು ಡಿ ಸಿ ಪಿ ರೋಹನ್ ಜಗದೀಶ್ ತಿಳಿಸಿದರು.

ಬಂಧಿತ ಆರೋಪಿ ಹೈದರಾಬಾದ್, ಮಧ್ಯಪ್ರದೇಶ, ಕರ್ನಾಟಕ, ಮುಂಬೈ ಮೊದಲಾದ ಕಡೆಗಳಲ್ಲಿ ಇದೇ ರೀತಿ ವಂಚನೆ ಮಾಡಿದ್ದಾನೆ.

2023 ರಲ್ಲಿ ಬೆಳಗಾವಿ ನಗರದಲ್ಲಿ ಕೆಲವು ಪಾಲಕರು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿತ್ತು.


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ