Breaking News

ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಕುಟುಂಬಕ್ಕೆ ಆಶ್ರಯ ಮನೆ

Spread the love

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಮೋಹನ ಅಂಬಿಗೇರ ಅವರ ಕುಟುಂಬಕ್ಕೆ ಮಾನವೀಯತೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಆಶ್ರಯ ಮನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರು ವಿಷಯ ಪ್ರಸ್ತಾಪಿಸಿದ್ದು, ಇದಕ್ಕೆ ಉತ್ತರ ನೀಡಿದ ಸಚಿವರು ಆದಷ್ಟು ಶೀಘ್ರವೇ ಅಂಜಲಿ ಅಂಬಿಗೇರ ಕುಟುಂಬದವರಿಗೆ ಮನೆ ಆಶ್ರಯ ಮನೆ ಕೊಡಲಾಗುವುದು ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಅಂಜಲಿ ಕುಟುಂಬಕ್ಕೆ ಆಶ್ರಯ ಮನೆ

ಇದೇ ವೇಳೆ ಬಿಜೆಪಿ ಸದಸ್ಯರಾದ ಸಿ.ಟಿ. ರವಿ, ಭಾರತೀ ಶೆಟ್ಟಿ, ಎನ್. ರವಿಕುಮಾರ್ ಹಾಗೂ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಿದ್ದಾರೆ. ಪ್ರತಿಕ್ರಿಯೆ ನೀಡಿದ ಸಚಿವರು, ಕೊಲೆಯಾದವರ ಕುಟುಂಬಕ್ಕೆ ಪರಿಹಾರ ಕೊಡುವ ಯಾವುದೇ ನಿಯಮವಿಲ್ಲ. ಆದರೂ ಕುಟುಂಬದಲ್ಲಿರುವ ಅಜ್ಜಿ, ಇಬ್ಬರು ಹೆಣ್ಣು ಮಕ್ಕಳಿಗೆ ಜೀವನಕ್ಕಾಗಿ ಪರಿಹಾರ ಕೊಡಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ