Breaking News
Home / Uncategorized / ಪಂಚಾಯಿತಿ ಚುನಾವಣೆಗೆ ಬಿಜೆಪಿಯಿಂದ ಪಂಚಸೂತ್ರ

ಪಂಚಾಯಿತಿ ಚುನಾವಣೆಗೆ ಬಿಜೆಪಿಯಿಂದ ಪಂಚಸೂತ್ರ

Spread the love

ಬೆಂಗಳೂರು, ನ.23- ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಪಂಚರತ್ನ, ಪಂಚಸೂತ್ರ ವಿಧಾನದ ಮೂಲಕ ಜಿಲ್ಲೆಯಲ್ಲಿ ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಇಂದು ನಡೆದ ಸಂಘಟನಾ ಸಭೆ ನಂತರ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆ ಬರುತ್ತಿದೆ.

ಕಳೆದ ಬಾರಿ ತಂದಿದ್ದ ಯೋಜನೆಯಿಂದಾಗಿ ಯಶಸ್ವಿಯಾಗಿದ್ದೆವು. ಇದೀಗ ಪಂಚರತ್ನ, ಪಂಚಸೂತ್ರ ವಿಧಾನ ತಂದಿದ್ದೇವೆ. ಒಂದೊಂದು ಸಮುದಾಯವನ್ನೂ ಗುರಿಯಾಗಿಟ್ಟು ಈ ವಿಧಾನ ಅನುಸರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಒಟ್ಟು ಆರು ತಂಡಗಳನ್ನು ಮಾಡಿಕೊಂಡು ಗ್ರಾಮ ಸ್ವರಾಜ್ ಎಂಬ ಕಾರ್ಯಕ್ರಮ ರೂಪಿಸಿ ಅದರಡಿ ಜಿಲ್ಲಾಯಲ್ಲಿ ಎರಡು ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿದೆ. ರಾಜ್ಯದ ನಗರ ಬಿಟ್ಟು ಎಲ್ಲೆಡೆ ಸಮಾವೇಶ ನಡೆಸಲಾಗುವುದು ಎಂದು ವಿವರಿಸಿದರು.


Spread the love

About Laxminews 24x7

Check Also

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಪ್ರೇಮಿ ಅರೆಸ್ಟ್‌!

Spread the love ಬೆಂಗಳೂರು: ಇಂಧನ ಟ್ಯಾಂಕ್ ಮೇಲೆ ಕುಳಿತಿದ್ದ ಮಹಿಳೆಯೊಂದಿಗೆ ಬೈಕ್ ಸವಾರಿ ಮಾಡುತ್ತಿರುವ ಯುವಕನನ್ನು ಹೆಬ್ಬಾಳ ಸಂಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ