Breaking News

ನಗರದ ಪಕ್ಕವಿದ್ದರೂ ಅಭಿವೃದ್ಧಿ ಮರೀಚಿಕೆ; ಮಾಯವಾದ ಶುಚಿತ್ವ

Spread the love

ಬೆಳಗಾವಿ: ನಗರದ ಮಗ್ಗುಲಲ್ಲೇ ಇರುವ ಹಿಂಡಲಗಾ ಗ್ರಾಮ ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಬೆಳಗಾವಿ ಮಹಾನಗರಕ್ಕೆ ಸರಿಸಮಾನಾಗಿ ಬೆಳೆಯಬೇಕಿದ್ದ ಊರು ಅಭಿವೃದ್ಧಿಯಿಂದ ದೂರವುಳಿದಿದೆ.

‘ನಮ್ಮೂರಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದೆ. ನಿರ್ವಹಣೆ ಕಾಣದ ಚರಂಡಿಗಳಿಂದ ಕೊಳಚೆ ನೀರು ಬಾವಿಗಳಿಗೆ ಸೇರುತ್ತಿದೆ.

ರಸ್ತೆಬದಿ ಸಂಗ್ರಹವಾಗುತ್ತಿರುವ ಮಳೆನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಇಡೀ ಊರಲ್ಲಿ ಶುಚಿತ್ವ ಇಲ್ಲದ್ದರಿಂದ ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ ಕಾಡುತ್ತಿದೆ’ ಎಂದು ಗ್ರಾಮಸ್ಥ ಸಂದೀಪ ಮೋರೆ ‘ಪ್ರಜಾವಾಣಿ’ ಮಂದೆ ಅವಲತ್ತುಕೊಂಡರು.ಬೆಳಗಾವಿ | ನಗರದ ಪಕ್ಕವಿದ್ದರೂ ಅಭಿವೃದ್ಧಿ ಮರೀಚಿಕೆ; ಮಾಯವಾದ ಶುಚಿತ್ವ

‘ಕೆಲವು ಮಾರ್ಗಗಳಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣವಾಗಿದೆ. ಉಳಿದೆಡೆ ರಸ್ತೆ ಹದಗೆಟ್ಟಿದ್ದು, ಸಂಚಾರಕ್ಕೂ ತೊಂದರೆಯಾಗುತ್ತಿದೆ’ ಎಂದು ಗ್ರಾಮಸ್ಥರು ದೂರಿದರು.

ಆರಂಭವಾಗದ ಕಾಮಗಾರಿ: ‘ಜಲಜೀವನ ಮಿಷನ್‌ ಯೋಜನೆಯಡಿ ಅನುದಾನ ಮಂಜೂರಾಗಿದೆ. ಆದರೆ, ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಈ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಿ ಪೂರ್ಣಗೊಳಿಸಿದರೆ, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಸಿಗುತ್ತದೆ. ಹಾಳಾಗಿರುವ ಚರಂಡಿಗಳನ್ನು ಹೊಸದಾಗಿ ಕಟ್ಟಬೇಕಿದೆ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ರಾಮಚಂದ್ರ ಕುದ್ರೇಮನಿಕರ ಹೇಳಿದರು.

‘ರಾಯಚೂರು-ಬಾಚಿ ರಾಜ್ಯ ಹೆದ್ದಾರಿ ನಮ್ಮೂರಲ್ಲಿ ಹಾಯ್ದುಹೋಗಿದೆ. ಇದು ಕರ್ನಾಟಕದಿಂದ ಮಹಾರಾಷ್ಟ್ರ ಮತ್ತು ಗೋವಾಕ್ಕೆ ಸಂಪರ್ಕ ಕಲ್ಪಿಸುತ್ತಿದ್ದು, ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ, ಹೆದ್ದಾರಿ ಇಕ್ಕಟ್ಟಿನಿಂದ ಕೂಡಿದೆ. ಆಗಾಗ ಅಪಘಾತ ಸಂಭವಿಸುತ್ತಲೇ ಇವೆ. ಹಾಗಾಗಿ ಹಿಂಡಲಗಾದ ಗಣೇಶ ದೇವಸ್ಥಾನದಿಂದ ಬಾಚಿಯವರೆಗೆ ಅದನ್ನು ವಿಸ್ತರಿಸಬೇಕು’ ಎಂದು ಒತ್ತಾಯಿಸಿದರು.

‘ನಮ್ಮಲ್ಲಿ ಕಸ ವಿಲೇವಾರಿ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿಲ್ಲ. ರಾಜ್ಯ ಹೆದ್ದಾರಿಗೆ ಹೊಂದಿಕೊಂಡ ಸ್ಮಶಾನಭೂಮಿಯೂ ಸುಸ್ಥಿತಿಯಲ್ಲಿಲ್ಲ. ನಗರಕ್ಕೆ ಹೊಂದಿಕೊಂಡ ಗ್ರಾಮ ನಿರೀಕ್ಷೆಯಂತೆ ಅಭಿವೃದ್ಧಿಯಾಗುತ್ತಿಲ್ಲ’ ಎಂದು ಮತ್ತೊಬ್ಬ ಸದಸ್ಯ ಡಿ.ಬಿ.ಪಾಟೀಲ ಆರೋಪಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ