ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಬಂಧಿತರಾಗಿ ರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಯವು ಮತ್ತೆ 5 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇಡಿ) ವಶಕ್ಕೆ ನೀಡಿದೆ.
ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಅವಧಿಯು ಗುರುವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್ ಇನ್ನೂ ವಿಚಾರಣೆ ಬಾಕಿ ಇರುವುದರಿಂದ 8 ದಿನಗಳ ಕಾಲ ಇ.ಡಿ. ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ನ್ಯಾಯಾಲಯವು 5 ದಿನ (ಜುಲೈ 22) ಇ.ಡಿ. ವಶಕ್ಕೆ ಒಪ್ಪಿಸಿದೆ. ಈವರೆಗಿನ ತನಿಖಾ ಮಾಹಿತಿಯ ದಾಖಲೆಗಳನ್ನು ಇ.ಡಿ. ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಸಿದರು.