Breaking News

210 ಗ್ರಾಂನ 3 ಚಿನ್ನದ ಕಿರೀಟ ಗಿಫ್ಟ್ ನೀಡಿದ ಗ್ರಾಮಸ್ಥರು

Spread the love

ವಿಜಯಪುರ: ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಮಾಜಿ ಸಚಿವ ಎಂಬಿ ಪಾಟೀಲ್ ಹಾಗೂ ಶಿವಾನಂದ್ ಪಾಟೀಲ್ ಗೆ ವಿಜಯಪುರದ ಕಾರಜೋಳ ಗ್ರಾಮಸ್ಥರು ಚಿನ್ನದ ಕಿರೀಟಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಕಾರಜೋಳದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದ ವೇಳೆ ಈ ಮೂವರಿಗೆ 210 ಗ್ರಾಂ ನ ಮೂರು ಚಿನ್ನದ ಕಿರೀಟಗಳನ್ನು ಗ್ರಾಮಸ್ಥರು ಗಿಫ್ಟ್ ಮಾಡಿದ್ದಾರೆ. ಆದರೆ ಮೂವರು ನಾಯಕರು ಕೂಡ ಚಿನ್ನದ ಕಿರೀಟ ಗಿಫ್ಟ್ ಪಡೆಯಲು ನಿರಾಕರಿಸಿದ್ದಾರೆ.ಒತ್ತಾಯ ಪೂರ್ವಕವಾಗಿ ಗ್ರಾಮಸ್ಥರು ನಾಯಕರಿಗೆ ಕಿರೀಟ ತೊಡಿಸಿದ್ದಾರೆ. ಕಿರೀಟ ಹಾಕಿದ್ದಕ್ಕೆ ಬೇಸರಗೊಂಡು ಶಿವಾನಂದ ಪಾಟೀಲ್ ಸಮಾರಂಭದಿಂದಲೇ ಹೊರನಡೆದ ಪ್ರಸಂಗವೂ ನಡೆದಿದೆ.

ವಿಜಯಪುರದ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪ್ರವಾಹ, ಕೋವಿಡ್ ಸಂಕಷ್ಟದ ಮಧ್ಯೆಯೂ ಗ್ರಾಮಸ್ಥರು ಚಿನ್ನದ ಕಿರೀಟ ನೀಡಿದ ಕಾರಣಕ್ಕೆ ಶಿವನಾಂದ ಪಾಟೀಲ್ ಬೇಸರಗೊಂಡು ಹೊರನಡೆದಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ