Breaking News

210 ಗ್ರಾಂನ 3 ಚಿನ್ನದ ಕಿರೀಟ ಗಿಫ್ಟ್ ನೀಡಿದ ಗ್ರಾಮಸ್ಥರು

Spread the love

ವಿಜಯಪುರ: ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಮಾಜಿ ಸಚಿವ ಎಂಬಿ ಪಾಟೀಲ್ ಹಾಗೂ ಶಿವಾನಂದ್ ಪಾಟೀಲ್ ಗೆ ವಿಜಯಪುರದ ಕಾರಜೋಳ ಗ್ರಾಮಸ್ಥರು ಚಿನ್ನದ ಕಿರೀಟಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಕಾರಜೋಳದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದ ವೇಳೆ ಈ ಮೂವರಿಗೆ 210 ಗ್ರಾಂ ನ ಮೂರು ಚಿನ್ನದ ಕಿರೀಟಗಳನ್ನು ಗ್ರಾಮಸ್ಥರು ಗಿಫ್ಟ್ ಮಾಡಿದ್ದಾರೆ. ಆದರೆ ಮೂವರು ನಾಯಕರು ಕೂಡ ಚಿನ್ನದ ಕಿರೀಟ ಗಿಫ್ಟ್ ಪಡೆಯಲು ನಿರಾಕರಿಸಿದ್ದಾರೆ.ಒತ್ತಾಯ ಪೂರ್ವಕವಾಗಿ ಗ್ರಾಮಸ್ಥರು ನಾಯಕರಿಗೆ ಕಿರೀಟ ತೊಡಿಸಿದ್ದಾರೆ. ಕಿರೀಟ ಹಾಕಿದ್ದಕ್ಕೆ ಬೇಸರಗೊಂಡು ಶಿವಾನಂದ ಪಾಟೀಲ್ ಸಮಾರಂಭದಿಂದಲೇ ಹೊರನಡೆದ ಪ್ರಸಂಗವೂ ನಡೆದಿದೆ.

ವಿಜಯಪುರದ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪ್ರವಾಹ, ಕೋವಿಡ್ ಸಂಕಷ್ಟದ ಮಧ್ಯೆಯೂ ಗ್ರಾಮಸ್ಥರು ಚಿನ್ನದ ಕಿರೀಟ ನೀಡಿದ ಕಾರಣಕ್ಕೆ ಶಿವನಾಂದ ಪಾಟೀಲ್ ಬೇಸರಗೊಂಡು ಹೊರನಡೆದಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ