Breaking News

ಸಿಎಂ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದ ಶಿವಶಂಕರ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ

Spread the love

ತಿರುವನಂತಪುರಂ:: ಕೇರಳ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ರಾಜಕೀಯ ಕಾರ್ಯದರ್ಶಿ ಎಂ.ಶಿವಶಂಕರ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಶಿವಶಂಕರ್ ಅವರನ್ನು ಬಂಧಿಸಿರುವ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ನ.26ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ 30 ಕೆಜಿ ಚಿನ್ನ ಸಾಗಾಟ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ಬೆನ್ನಲ್ಲೇ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಶಿವಶಂಕರ್ ಅವರನ್ನು ವಜಾ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ